ಕೊಪ್ಪಳ: ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿ ಗಮನ ಸೆಳೆದಿದ್ದಾರೆ.
ತಾಲೂಕಿನ ಬಹದ್ದೂರ್ ಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು 5, 6, 7, 8ನೇ ತರಗತಿಯ 220 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರು. ಈ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿ ತರಗತಿಯ 6 ವಿದ್ಯಾರ್ಥಿಗಳನ್ನು ಜಿಂದಾಲ್ನಿಂದ ಬೆಂಗಳೂರಿಗೆ ವಿಮಾನ ಪ್ರವಾಸ ಮಾಡಿಸುವ ಯೋಜನೆಯನ್ನು ಹಾಕಿಕೊಂಡಿದ್ದರು.
ಅದರಂತೆ 24 ವಿದ್ಯಾರ್ಥಿಗಳ ಜತೆಗೆ ಶಾಲೆ ಸಹ ಶಿಕ್ಷಕರು ಹಾಗೂ ಬಿಸಿಯೂಟ ಸಿಬ್ಬಂದಿ, ಎಸ್ಡಿಎಂಸಿ ಪದಾಧಿಕಾರಿಗಳು ಸೇರಿ ಒಟ್ಟು 40 ಮಂದಿ ಶುಕ್ರವಾರ ಕೊಪ್ಪಳದಿಂದ ಬಳ್ಳಾರಿ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ತೆರಳಿದರು. ವಿದ್ಯಾರ್ಥಿಗಳ 2 ದಿನದ ಪ್ರಯಾಣದ ವೆಚ್ಚ 5ಲಕ್ಷ ರೂ. ಅನ್ನು ಬೀರಪ್ಪ ಅಂಡಗಿ ಅವರೇ ಭರಿಸಿದ್ದಾರೆ. ವಿಧಾನಸೌಧ, ತಾರಾಲಯ ಮುಖ್ಯಮಂತ್ರಿಗಳ ಕೊಠಡಿ ಸೇರಿ ವಿಮಾನದಲ್ಲಿ ಪ್ರಯಾಣಿಸುವಂತಹ ಸೌಭಾಗ್ಯ ಕಲ್ಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ನಮ್ಮ ಶಾಲೆಯ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಪ್ರಯಾಣ ಮಾಡಿಸಬೇಕು ಎನ್ನುವುದು ನಮ್ಮ ಕನಸಾಗಿತ್ತು. ಮಕ್ಕಳಿಗೆ ವಿಧಾನ ಸೌಧದ ಒಳಾಂಗಣ, ಸಿಎಂ ಕೊಠಡಿ ಸೇರಿ ವಿವಿಧ ಸ್ಥಳ ತೋರಿಸಿದ್ದೇವೆ. ಎಲ್ಲ ವೆಚ್ಚ ನಾವೇ ಭರಿಸಿದ್ದು, ಅವರ ಕನಸು ನನಸು ಮಾಡಿದ್ದೇವೆ.
– ಬೀರಪ್ಪ ಅಂಡಗಿ, ಬಹದ್ದೂರ್ ಬಂಡಿ ಶಾಲೆ ಮುಖ್ಯ ಶಿಕ್ಷಕ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…