ಚಿಕ್ಕಮಗಳೂರು: ಇಸ್ಲಾಂ ಧರ್ಮದಲ್ಲಿ ಯುವತಿಯರು ಬುರ್ಖಾ ಧರಿಸಿ ಮೈಮುಚ್ಚಬೇಕೆಂಬುವುದು ಮೂಲಭೂತ ನಿಯಮವಾಗಿದೆ. ಈ ಹಿಂದೆ ಕಾಲೇಜಿಗೆ ಬುರ್ಖಾ ಧರಿಸಿಕೊಂಡು ಬರಬಾರದು, ಒಂದು ವೇಳೆ ಮುಸ್ಲಿಮ್ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಬಂದರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ಸಾಗರ, ತೀರ್ಥಹಳ್ಳಿ, ಸಹ್ಯಾದ್ರಿ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ತೀರ್ಮಾನ ಮಾಡಿದ್ದರು. ಕೆಲವು ದಿನಗಳ ಕಾಲ ಶಾಲು ಧರಿಸಿಕೊಂಡು ಬಂದ ವಿದ್ಯಾರ್ಥಿಗಳು ಬಳಿಕ ಹಿಂದೆ ಸರಿದಿದ್ದರು,
ಇದೀಗ ಚಿಕ್ಕಮಗಳೂರಿನ ಕೊಪ್ಪ ಸರಕಾರಿ ಕಾಲೇಜಿನಲ್ಲೂ ಈ ಕುರಿತಾದಂತೆ ವಿವಾದಗಳು ಭುಗಿಲೆದ್ದಿದ್ದು, ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಬುರ್ಖಾ ಧರಿಸಲು ಅವಕಾಶ ಮಾಡಿಕೊಟ್ಟರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದಾರೆ. ಬುರ್ಖಾ ನಿಷೇಧಿಸಬೇಕೆಂದು ಪ್ರಾಂಶುಪಾಲರಿಗೆ ಮನವಿ ಮಾಡಿದಾಗ, ಅಂಥ ಯಾವುದೇ ನಿಯಮ ನಮ್ಮ ವಿದ್ಯಾಸಂಸ್ಥೆಯಲ್ಲಿಲ್ಲ ಎಂದು ಮನವಿಯನ್ನು ತಳ್ಳಿ ಹಾಕಿದ್ದರು.
ಪ್ರಾಂಶುಪಾಲರ ಹೇಳಿಕೆಯಿಂದ ಕೆರಳಿದ ಎಬಿವಿಪಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರೋದಾಗಿ ಪ್ರಿನ್ಸ್ ಪಾಲ್ಗೆ ಸೆಡ್ಡು ಹೊಡಿದಿದ್ದಾರೆ. ಹೇಳಿದಂತೆ ಜುಲೈ 2ನೇ ಸೋಮವಾರ ಎಬಿವಿಪಿ ವಿದ್ಯಾರ್ಥಿಗಳೆಲ್ಲರೂ ಕಾಲೇಜಿಗೆ ಕೇಸರಿ ಶಲ್ಯ ಧರಿಸೇ ಬಂದಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…