ಚಿಕ್ಕಮಗಳೂರು: ಇಸ್ಲಾಂ ಧರ್ಮದಲ್ಲಿ ಯುವತಿಯರು ಬುರ್ಖಾ ಧರಿಸಿ ಮೈಮುಚ್ಚಬೇಕೆಂಬುವುದು ಮೂಲಭೂತ ನಿಯಮವಾಗಿದೆ. ಈ ಹಿಂದೆ ಕಾಲೇಜಿಗೆ ಬುರ್ಖಾ ಧರಿಸಿಕೊಂಡು ಬರಬಾರದು, ಒಂದು ವೇಳೆ ಮುಸ್ಲಿಮ್ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಬಂದರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ಸಾಗರ, ತೀರ್ಥಹಳ್ಳಿ, ಸಹ್ಯಾದ್ರಿ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ತೀರ್ಮಾನ ಮಾಡಿದ್ದರು. ಕೆಲವು ದಿನಗಳ ಕಾಲ ಶಾಲು ಧರಿಸಿಕೊಂಡು ಬಂದ ವಿದ್ಯಾರ್ಥಿಗಳು ಬಳಿಕ ಹಿಂದೆ ಸರಿದಿದ್ದರು,
ಇದೀಗ ಚಿಕ್ಕಮಗಳೂರಿನ ಕೊಪ್ಪ ಸರಕಾರಿ ಕಾಲೇಜಿನಲ್ಲೂ ಈ ಕುರಿತಾದಂತೆ ವಿವಾದಗಳು ಭುಗಿಲೆದ್ದಿದ್ದು, ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಬುರ್ಖಾ ಧರಿಸಲು ಅವಕಾಶ ಮಾಡಿಕೊಟ್ಟರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆಂದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದಾರೆ. ಬುರ್ಖಾ ನಿಷೇಧಿಸಬೇಕೆಂದು ಪ್ರಾಂಶುಪಾಲರಿಗೆ ಮನವಿ ಮಾಡಿದಾಗ, ಅಂಥ ಯಾವುದೇ ನಿಯಮ ನಮ್ಮ ವಿದ್ಯಾಸಂಸ್ಥೆಯಲ್ಲಿಲ್ಲ ಎಂದು ಮನವಿಯನ್ನು ತಳ್ಳಿ ಹಾಕಿದ್ದರು.
ಪ್ರಾಂಶುಪಾಲರ ಹೇಳಿಕೆಯಿಂದ ಕೆರಳಿದ ಎಬಿವಿಪಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರೋದಾಗಿ ಪ್ರಿನ್ಸ್ ಪಾಲ್ಗೆ ಸೆಡ್ಡು ಹೊಡಿದಿದ್ದಾರೆ. ಹೇಳಿದಂತೆ ಜುಲೈ 2ನೇ ಸೋಮವಾರ ಎಬಿವಿಪಿ ವಿದ್ಯಾರ್ಥಿಗಳೆಲ್ಲರೂ ಕಾಲೇಜಿಗೆ ಕೇಸರಿ ಶಲ್ಯ ಧರಿಸೇ ಬಂದಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…