ಚೆನ್ನೈ: ಕೊಯಮತ್ತೂರಿನಲ್ಲಿ ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ( ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಚೆನ್ನೈನ 45ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದೆ.
ಸ್ಫೋಟಕ್ಕೆ ಸಂಬಂಧಿಸಿದ ಶಂಕಿತರು ಮತ್ತು ಬೆಂಬಲಿಗರ ಆಸ್ತಿಗಳನ್ನು ಎನ್ಐಎ ಪರಿಶೀಲನೆ ನಡೆಸುತ್ತಿದ್ದು, ಚೆನ್ನೈನ ಪುದುಪೇಟ್, ಮನ್ನಾಡಿ, ಜಮಾಲಿಯಾ ಮತ್ತು ಪೆರಂಬೂರ್ನಲ್ಲಿ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಕೊಯಮತ್ತೂರಿನ ಕೊಟ್ಟೈಮೇಡು, ಉಕ್ಕಡಂ, ಪೊನ್ವಿಜ ನಗರ ಮತ್ತು ರಥಿನಪುರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಬುದ್ಧಿವಂತಿಕೆಯಿಂದ ವ್ಯವಹರಿಸಿ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಅಕ್ಬೋಬರ್ 23ರ ಭಾನುವಾರ ದೀಪಾವಳಿ ಸಮಯದಲ್ಲಿ ಮುಂಜಾನೆ 4.20ರ ಸುಮಾರಿಗೆ ತಮಿಳುನಾಡಿನ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಳವಡಿಸಿದ್ದ ಮಾರುತಿ 800 ಕಾರೊಂದು ಸ್ಫೋಟಗೊಂಡಿತ್ತು. ಈ ವೇಳೆ 25 ವರ್ಷದ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದನು. ಈ ಕುರಿತಂತೆ ತನಿಖೆ ನಡೆಸಿದ ಪೊಲೀಸರು ಜಮೀಶಾ ಮುಬಿನ್ ಮನೆಯಲ್ಲಿ ದೇಶಿ ನಿರ್ಮಿತ ಮದ್ದುಗುಂಡುಗಳು ಮತ್ತು ಕೆಲವು ಐಸಿಸ್ ಬೆಂಬಲಿತ ಬರಹಗಳನ್ನು ವಶಪಡಿಸಿಕೊಂಡಿದ್ದರು.
ಅಕ್ಟೋಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವ ಜವಾಬ್ದಾರಿ ಹೊತ್ತುಕೊಂಡಿದೆ. ಎನ್ಐಎ ಭಾರತದ ಪ್ರಾಥಮಿಕ ಭಯೋತ್ಪಾದನಾ ನಿಗ್ರಹ ಕಾರ್ಯಪಡೆಯಾಗಿದೆ.
ಬುದ್ಧಿವಂತಿಕೆಯಿಂದ ವ್ಯವಹರಿಸಿ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…