Featured

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : 45ಕ್ಕೂ ಹೆಚ್ಚು ಕಡೆ NIA ದಾಳಿ – Vishwanews24

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : 45ಕ್ಕೂ ಹೆಚ್ಚು ಕಡೆ NIA ದಾಳಿ

ಚೆನ್ನೈ: ಕೊಯಮತ್ತೂರಿನಲ್ಲಿ ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ( ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಚೆನ್ನೈನ 45ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದೆ.

ಸ್ಫೋಟಕ್ಕೆ ಸಂಬಂಧಿಸಿದ ಶಂಕಿತರು ಮತ್ತು ಬೆಂಬಲಿಗರ ಆಸ್ತಿಗಳನ್ನು ಎನ್‍ಐಎ ಪರಿಶೀಲನೆ ನಡೆಸುತ್ತಿದ್ದು, ಚೆನ್ನೈನ ಪುದುಪೇಟ್, ಮನ್ನಾಡಿ, ಜಮಾಲಿಯಾ ಮತ್ತು ಪೆರಂಬೂರ್‌ನಲ್ಲಿ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಕೊಯಮತ್ತೂರಿನ ಕೊಟ್ಟೈಮೇಡು, ಉಕ್ಕಡಂ, ಪೊನ್ವಿಜ ನಗರ ಮತ್ತು ರಥಿನಪುರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಬುದ್ಧಿವಂತಿಕೆಯಿಂದ ವ್ಯವಹರಿಸಿ.. ನೋಡಿ ಇಂದಿನ ದಿನ ಭವಿಷ್ಯ – Vishwanews24

ಅಕ್ಬೋಬರ್ 23ರ ಭಾನುವಾರ ದೀಪಾವಳಿ ಸಮಯದಲ್ಲಿ ಮುಂಜಾನೆ 4.20ರ ಸುಮಾರಿಗೆ ತಮಿಳುನಾಡಿನ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್‍ಪಿಜಿ ಸಿಲಿಂಡರ್ ಅಳವಡಿಸಿದ್ದ ಮಾರುತಿ 800 ಕಾರೊಂದು ಸ್ಫೋಟಗೊಂಡಿತ್ತು. ಈ ವೇಳೆ 25 ವರ್ಷದ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದನು. ಈ ಕುರಿತಂತೆ ತನಿಖೆ ನಡೆಸಿದ ಪೊಲೀಸರು ಜಮೀಶಾ ಮುಬಿನ್ ಮನೆಯಲ್ಲಿ ದೇಶಿ ನಿರ್ಮಿತ ಮದ್ದುಗುಂಡುಗಳು ಮತ್ತು ಕೆಲವು ಐಸಿಸ್ ಬೆಂಬಲಿತ ಬರಹಗಳನ್ನು ವಶಪಡಿಸಿಕೊಂಡಿದ್ದರು.

ಅಕ್ಟೋಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುವ ಜವಾಬ್ದಾರಿ ಹೊತ್ತುಕೊಂಡಿದೆ. ಎನ್‍ಐಎ ಭಾರತದ ಪ್ರಾಥಮಿಕ ಭಯೋತ್ಪಾದನಾ ನಿಗ್ರಹ ಕಾರ್ಯಪಡೆಯಾಗಿದೆ.

ಬುದ್ಧಿವಂತಿಕೆಯಿಂದ ವ್ಯವಹರಿಸಿ.. ನೋಡಿ ಇಂದಿನ ದಿನ ಭವಿಷ್ಯ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago