ಕೋಟ : ಕೋಟ ಪೊಲೀಸರ ಅತಿರೇಕದ ವರ್ತನೆಗೆ ಇದೀಗ ಭಾರೀ ಬೆಲೆ ತೆರಬೇಕಾಗಿ ಬಂದಿದ್ದು, ಈ ಪ್ರಕರಣದ ಸಮಗ್ರ ತನಿಖೆಯನ್ನು ಸಿಓಡಿಗೆ ವಹಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಇಂದು ಹಲ್ಲೆಗೊಳಗಾದ ಕೊರಗರ ಕಾಲೋನಿ ಭೇಟಿ ನೀಡಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಮೆಹಂದಿ ಸಂದರ್ಭ ಪೊಲೀಸ್ ಇಲಾಖೆ ನಡೆದುಕೊಂಡ ರೀತಿಗೆ ನೋವಾಗಿದೆ. ಈ ಪ್ರಕರಣವನ್ನು ಸಿಓಡಿ ತಬಿಖೆಗೆ ವಹಿಸಲಾಗುತ್ತದೆ ಹಾಗೂ ಪೊಲೀಸರಿಂದ ಹಲ್ಲೆಗೊಳಗಾದವರಿಗೆ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂ. ನೀಡಲಾಗುವುದು ಎಂದರು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಸಂದರ್ಭ ಪೊಲೀಸರಿಂದ ಹಲ್ಲೆ ನಡೆದ ರಾಜೇಶ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ತುಂಬಿ ಮಾತನಾಡಿದರು.
ನಾನು ಕೂಡಾ ಕೊರಗ ಸಮುದಾಯದ ಜೊತೆ ಬೆಳೆದವ ಅಕ್ಕಿ ಗಿರಣಿಯಲ್ಲಿ ಕೊರಗ ಸಮುದಾಯದವರೊಂದಿಗೆ ಮೂಟೆ ಹೊರುತ್ತಿದ್ದೆ. ಅವರ ನೋವು ನಲಿವು ನನಗೆ ಗೊತ್ತಿದೆ. ತಳಸ್ತರದ ಮುಗ್ದ ಸಮುದಾಯ ಇಂತಹ ಕಾರ್ಯಕ್ರಮ ಮಾಡಿದ್ದೇ ಅಪರೂಪ. ಈ ಘಟನೆಯಿಂದ ಸಮುದಾಯಕ್ಕೆ ನೋವಾಗಿದೆ. ಕುಟುಂಬಕ್ಕೆ ಅಘಾತವಾಗಿದೆ. ಆ ದಿನ ಪೊಲೀಸರಿಂದ ಹಲ್ಲೆಗೊಳಗಾದವರಿಗೆ ಸರ್ಕಾರ ತಲಾ ಎರಡು ಲಕ್ಷ ನೀಡುತ್ತಿದ್ದು, ಇವತ್ತು 50ಸಾವಿರವನ್ನು ನೀಡಲಾಗುತ್ತದೆ ಎಂದರು
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…