Featured

ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು ಅಮಾನವೀಯ : ಸಿದ್ದರಾಮಯ್ಯ – Vishwanews24

ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಬಿಜೆಪಿಗುಪ್ತ ಅಜೆಂಡಾವೇ? ..

ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ..

ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?

ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ ..

ಸಿದ್ದರಾಮಯ್ಯ ಆರೋಪ ..

ಬೆಂಗಳೂರು: “ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಸಿಎಂ ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ?” ಎಂದು ಪ್ರಶ್ನಿಸಿದ್ದಾರೆ.

“ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?” ಎಂದು ಕೇಳಿದ್ದಾರೆ.

“ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ” ಎಂದಿದ್ದಾರೆ.

“ಎಸ್‌‌ಸಿಪಿ/ಟಿಎಸ್‌‌ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

27 seconds ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

30 minutes ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

41 minutes ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

55 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

1 hour ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

1 hour ago