Featured

ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು ಅಮಾನವೀಯ : ಸಿದ್ದರಾಮಯ್ಯ – Vishwanews24

ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಬಿಜೆಪಿಗುಪ್ತ ಅಜೆಂಡಾವೇ? ..

ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ..

ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?

ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ ..

ಸಿದ್ದರಾಮಯ್ಯ ಆರೋಪ ..

ಬೆಂಗಳೂರು: “ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಸಿಎಂ ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ?” ಎಂದು ಪ್ರಶ್ನಿಸಿದ್ದಾರೆ.

“ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?” ಎಂದು ಕೇಳಿದ್ದಾರೆ.

“ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ, ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ” ಎಂದಿದ್ದಾರೆ.

“ಎಸ್‌‌ಸಿಪಿ/ಟಿಎಸ್‌‌ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

2 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

2 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

3 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

4 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

4 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 hours ago