Featured

ಕೊರೊನಾಗೆ  ಮೂರನೇ ಲಸಿಕೆ ; ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಕೇಂದ್ರ ಅನುಮತಿ -Vishwanews24

ಕೊರೊನಾಗೆ  ಮೂರನೇ ಲಸಿಕೆ ; ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಕೇಂದ್ರ ಅನುಮತಿ -Vishwanews24

ನವದೆಹಲಿ : ದೇಶದಲ್ಲಿ ಸ್ವದೇಶಿ ಕೊರೊನಾ ಲಸಿಕೆಗಳಾದ ಕೋವಿಶೀಲ್ಡ್, ಕೋವಾಕ್ಸಿನ್‌ ತುರ್ತು ಬಳಕೆಗೆ ಅನುಮೋದನೆ ನೀಡಿದ ಬಳಿಕ ಇದೀಗ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ.

ಮಾಸ್ಕೋದಲ್ಲಿರುವ ಸೆಚನೋವ್ ವಿವಿಯ ಗಮಾಲಿಯಾ ಸಂಶೋಧನಾ ಕೇಂದ್ರ ಮತ್ತು ರಷ್ಯಾ ರಕ್ಷಣಾ ಸಚಿವಾಲಯ ಅಭಿವೃದ್ದಿ ಪಡಿಸಿದ ವಿಶ್ವದ ಮೊದಲ ಕೊರೊನಾ ವಾಕ್ಸಿನ್‌ ಆದ ಸ್ಪುಟ್ನಿಕ್ ವಿ ಲಸಿಕೆಯನ್ನು ರಷ್ಯಾ 2020ರ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಜನರ ಮೇಲೆ ಇದರ ಪ್ರಯೋಗವನ್ನು ಡಾ| ರೆಡ್ಡೀಸ್ ಕಂಪನಿ ನಡೆಸುತ್ತಿದ್ದು ತುರ್ತು ಬಳಕೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ಡಿಸಿಜಿಐ ಈ ಲಸಿಕೆ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

ಕಟಪಾಡಿ : ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆ ! Vishwanews24

ಭಾರತದಲ್ಲಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಲಾಗಿದ್ದು ಆ ಲಸಿಕೆಯನ್ನು ಪ್ರಸ್ತುತ 45 ವರ್ಷ ಮೇಲ್ಪಟ್ಟ ಜನರಿಗೆ ನೀಡಲಾಗುತ್ತಿದೆ. ಆದರೆ ಪ್ರಸ್ತುತ ಈ ಲಸಿಕೆಗಳ ಕೊರತೆ ಕಾಣಿಸಿಕೊಂಡಿದೆ.

ಏತನ್ಮಧ್ಯೆ ಸ್ಪುಟ್ನಿಕ್ ಲಸಿಕೆ ಭಾರತದಲ್ಲಿ ಅನುಮತಿ ದೊರೆತಿರುವುದು ಲಸಿಕೆ ಅಭಿಯಾನಕ್ಕೆ ಹುಮ್ಮಸ್ಸು ತುಂಬಿದೆ. ಇನ್ನು ಹೈದರಾಬಾದ್‍ನ ಡಾ| ರೆಡ್ಡೀಸ್ ಲ್ಯಾಬೋರೇಟರಿ, ಹೆಟೆರೊ ಬಯೋಫಾರ್ಮಾ, ಗ್ಲಾಂಡ್ ಫಾರ್ಮಾ, ಸ್ಟೆಲಿಸ್ ಬಯೋಫಾರ್ಮಾ ಹಾಗೂ ವಿಕ್ರೋ ಬಯೋಟೆಕ್ ಕಂಪನಿಗಳಲ್ಲಿ ಈಗಾಗಲೇ ಸ್ಪುಟ್ನಿಕ್ ಲಸಿಕೆಯನ್ನು ತಯಾರಿಸಲಾಗುತ್ತಿದ್ದು ವರ್ಷಕ್ಕೆ 85 ಕೋಟಿ ಸ್ಪುಟ್ನಿಕ್ ಲಸಿಕೆಯನ್ನು ತಯಾರಿಸುವ ಸಾಮರ್ಥ್ಯ ಭಾರತದ ವಿವಿಧ ಘಟಕಗಳಿಗಿದೆ ಎಂದು ವರದಿಯಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆನ್ ಲೈನ್ ತರಗತಿಗಳು ಇರುತ್ತವೆ, ಆನ್ ಲೈನ್ ಪರೀಕ್ಷೆ ಸಾಧ್ಯವಿಲ್ಲ : ಡಿಸಿಎಂ -Vishwanews24

ಇನ್ನು ಈ ಲಸಿಕೆಯೂ ಸಮೃದ್ಧವಾಗಿ ಪ್ರತಿಕಾಯಗಳ ಉತ್ಪತ್ತಿಗೆ ಸಹಾಯ ಮಾಡಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಧಿಕಗೊಳಿಸಿ ಸೋಂಕು ನಿಯಂತ್ರಣಕ್ಕೆ ತರಲು ಸಹಕಾರಿಯಾಗುತ್ತದೆ ಎಂದು ವರದಿಯಾಗಿದೆ. ಹಾಗೆಯೇ ಸರ್ಕಾರ ಇನ್ನು ಜಾನ್ಸನ್ ಅಂಡ್ ಜಾನ್ಸನ್, ನೋವಾವಾಕ್ಸ್, ಜೈಡಸ್ ಕ್ಯಾಡಿಲಾ ಹಾಗೂ ಇಂಟ್ರಾನೇಸಲ್ (ಮೂಗಿನ ಮೂಲಕ ತೆಗೆದುಕೊಳ್ಳುವ) ಲಸಿಕೆಗೂ ಅನುಮತಿ ನೀಡುವ ಸಾಧ್ಯತೆಗಳಿವೆ.

ಕಾಪು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

4 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

7 hours ago