ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಶಾಲೆಗಳು ಭೌತಿಕ ತರಗತಿಯೊಂದಿಗೆ ಆನ್ ಲೈನ್ ಸೇರಿದಂತೆ ಪರ್ಯಾಯ ಮಾರ್ಗದಲ್ಲಿ ತರಗತಿ ನಡೆಸಬೇಕು. ವಿದ್ಯಾರ್ಥಿಗಳು ತಮಗೆ ಇಷ್ಟವಾದ ರೀತಿಯಲ್ಲಿ ತರಗತಿಗೆ ಹಾಜರಾಗಬಹುದು. ಯಾವ ವಿದ್ಯಾರ್ಥಿಗಳಿಗೂ ಶಾಲೆಗೆ ಬರುವಂತೆ ಶಿಕ್ಷಕರು ಒತ್ತಾಯ ಮಾಡುವಂತಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಬರುವುದಕ್ಕೆ ಪಾಲಕರ ಅನುಮತಿ ಕಡ್ಡಾಯಗೊಳಿಸಲಾಗಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ತರಗತಿಗಳು ನಡೆಯುತ್ತವೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ಶಾಲಾ ಅವಧಿ ಇರುತ್ತದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಬೇಕು. 15 ರಿಂದ 20 ವಿದ್ಯಾರ್ಥಿಗಳ ಗುಂಪು ರಚಿಸಿ, ಒಂದು ದಿನ ತರಗತಿ, ಒಂದು ದಿನ ರಜೆಯ ವ್ಯವಸ್ಥೆಯಂತೆ ಶಿಕ್ಷಕರು ಪಾಠ ಮಾಡಬೇಕು. ಶನಿವಾರ ಹಾಗೂ ಭಾನುವಾರ ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಲೇಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಎರಡೂ ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಬೇಕು. ಶಾಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ರೀತಿ ಕಟ್ಟುನಿಟ್ಟಾಗಿ ಶಾಲೆಗಳನ್ನು ಆರಂಭಿಸಬೇಕು ಎಂದು ಸರ್ಕಾರ ಎಲ್ಲ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…