Featured

ಕೊರೊನಾ ಆತಂಕ : ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ – Vishwanews24

ಕೊರೊನಾ ಆತಂಕ : ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ – Vishwanews24

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಶಾಲೆಗಳು ಭೌತಿಕ ತರಗತಿಯೊಂದಿಗೆ ಆನ್ ಲೈನ್ ಸೇರಿದಂತೆ ಪರ್ಯಾಯ ಮಾರ್ಗದಲ್ಲಿ ತರಗತಿ ನಡೆಸಬೇಕು. ವಿದ್ಯಾರ್ಥಿಗಳು ತಮಗೆ ಇಷ್ಟವಾದ ರೀತಿಯಲ್ಲಿ ತರಗತಿಗೆ ಹಾಜರಾಗಬಹುದು. ಯಾವ ವಿದ್ಯಾರ್ಥಿಗಳಿಗೂ ಶಾಲೆಗೆ ಬರುವಂತೆ ಶಿಕ್ಷಕರು ಒತ್ತಾಯ ಮಾಡುವಂತಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಬರುವುದಕ್ಕೆ ಪಾಲಕರ ಅನುಮತಿ ಕಡ್ಡಾಯಗೊಳಿಸಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ತರಗತಿಗಳು ನಡೆಯುತ್ತವೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ಶಾಲಾ ಅವಧಿ ಇರುತ್ತದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಬೇಕು. 15 ರಿಂದ 20 ವಿದ್ಯಾರ್ಥಿಗಳ ಗುಂಪು ರಚಿಸಿ, ಒಂದು ದಿನ ತರಗತಿ, ಒಂದು ದಿನ ರಜೆಯ ವ್ಯವಸ್ಥೆಯಂತೆ ಶಿಕ್ಷಕರು ಪಾಠ ಮಾಡಬೇಕು. ಶನಿವಾರ ಹಾಗೂ ಭಾನುವಾರ ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಲೇಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.

ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಎರಡೂ ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಬೇಕು. ಶಾಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ರೀತಿ ಕಟ್ಟುನಿಟ್ಟಾಗಿ ಶಾಲೆಗಳನ್ನು ಆರಂಭಿಸಬೇಕು ಎಂದು ಸರ್ಕಾರ ಎಲ್ಲ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

6 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

7 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago