ಕೊರೊನಾ ಇಡೀ ಜಗತ್ತಿಗೆ ಮಾರಕವಾಗಿದ್ದರೆ, ಬಿಜೆಪಿ ಪಾಲಿಗೆ ಕಾಮಧೇನು : ಎಂ.ಬಿ.ಪಾಟೀಲ -Vishwanews24

ಹಾವೇರಿ: ‘ಕೊರೊನಾ ಎಂಬುದು ಇಡೀ ಜಗತ್ತಿಗೆ ಮಾರಕವಾಗಿದ್ದರೆ, ಬಿಜೆಪಿ ಪಾಲಿಗೆ ಕಾಮಧೇನು, ಕಲ್ಪವೃಕ್ಷವಾಗಿದೆ. ಕೋವಿಡ್‌ ಉಪಕರಣಗಳ ಖರೀದಿಯಲ್ಲಿ ಸಚಿವರು, ಅಧಿಕಾರಿಗಳು ಲೂಟಿ ಹೊಡೆಯುವ ಮೂಲಕ ಕೊರೊನಾ ನಿರ್ವಹಣೆಯನ್ನು ಜಾತ್ರೆ, ಹಬ್ಬವನ್ನಾಗಿ ಮಾಡಿಕೊಂಡಿದ್ದಾರೆ’ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರ ಆರೋಪ ಮಾಡಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸರ್ಕಾರದ ವಿವಿಧ ಇಲಾಖೆಗಳು ಖರ್ಚು ಮಾಡಿರುವ ₹4 ಸಾವಿರ ಕೋಟಿಯಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಸಚಿವರು ಮತ್ತು ಅಧಿಕಾರಿಗಳು ಜೇಬಿಗಿಳಿಸಿದ್ದಾರೆ. ತಮಿಳುನಾಡು ಸರ್ಕಾರ ತಲಾ ವೆಂಟಿಲೇಟರ್‌ಗೆ ₹4.78 ಲಕ್ಷ ಕೊಟ್ಟು ಖರೀದಿಸಿದೆ. ಆದರೆ, ರಾಜ್ಯ ಸರ್ಕಾರ ₹5.6 ಲಕ್ಷದಿಂದ ₹18.20 ಲಕ್ಷಗಳವರೆಗೆ ದುಬಾರಿ ಹಣ ಕೊಟ್ಟು ಖರೀದಿಸಿದೆ. ಅಷ್ಟೇ ಅಲ್ಲ, ವೆಂಟಿಲೇಟರ್‌ಗಳು ಕಳಪೆ ಗುಣಮುಟ್ಟದಿಂದ ಕೂಡಿವೆ ಎಂದು ಟೀಕಿಸಿದರು.

ಕೋವಿಡ್‌ ನಿಯಂತ್ರಣದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿವೆ. ರಾಜ್ಯದಲ್ಲಿ ಮಾರ್ಚ್‌ 9ರಂದು ಕೇವಲ ಒಂದು ಸೋಂಕು ಪ್ರಕರಣ ಇದ್ದದ್ದು, ಈಗ ಒಂದು ಲಕ್ಷ ಮೀರಿದೆ. ಆಂಬುಲೆನ್ಸ್‌ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಕಾಡುತ್ತಿದೆ. ‘ಆತ್ಮನಿರ್ಭರ’ ಪ್ಯಾಕೇಜ್‌ನಲ್ಲಿ ಘೋಷಿಸಿದ ಪರಿಹಾರ ಹಣ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಲ್ಲ. ದೇಶದಲ್ಲಿ ವೆಂಟಿಲೇಟರ್‌ ಕೊರತೆ ಇದ್ದರೂ, ಬೇರೆ ದೇಶಗಳಿಗೆ ರಫ್ತು ಮಾಡಲು ಪ್ರಧಾನಿ ಮೋದಿ ಅನುಮತಿ ನೀಡಿದ್ದಾರೆ ಎಂದು ಕುಟುಕಿದರು.

ಪತ್ರಿಕಾಗೋಷ್ಠಿಯಲ್ಲಿ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್‌, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಮನೋಹರ ತಹಸೀಲ್ದಾರ್‌, ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಶಾಸಕರಾದ ಬಿ.ಎಚ್‌.ಬನ್ನಿಕೋಡ, ಬಿ.ಆರ್‌.ಪಾಟೀಲ, ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ಜಿ.ಪಂ.ಅಧ್ಯಕ್ಷ ಬಸನಗೌಡ ದೇಸಾಯಿ, ಜಿ.ಪಂ.ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ ಇತರರು ಇದ್ದರು.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

36 minutes ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

3 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

6 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

6 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

6 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

7 hours ago