ಮಂಗಳೂರು : ಕೊರೊನಾದ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆ ಸರಕಾರದ ನೂತನ ಆದೇಶದ ಪ್ರಕಾರ, ಏಪ್ರಿಲ್ 21ರ ರಾತ್ರಿಯಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶ್ರೀ ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ವಿಶೇಷ ಉತ್ಸವಾದಿಗಳು ಇರುವುದಿಲ್ಲ. ಹಾಗೂ ದೇವಾಲಯಗಳಲ್ಲಿನ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಹಂಚಿಕೆ ಮಾಡುವುದನ್ನು ರಾತ್ರಿ ಬುಧವಾರ ರಾತ್ರಿ 9 ಗಂಟೆಯಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24
ಶ್ರೀ ದೇವಳದಲ್ಲಿ ಈಗಾಗಲೇ ಭಕ್ತಾದಿಗಳು ಸರ್ಪ ಸಂಸ್ಕಾರ ಸೇವೆ ಹಾಗೂ ಮುಂಗಡವಾಗಿ ಕಾದಿರಿಸಲ್ಪಟ್ಟ ಇನ್ನಿತರ ಯಾವುದೇ ಸೇವೆಗಳನ್ನು ಕೂಡಾ ನಡೆಸುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದ್ದು, ಮುಂದಕ್ಕೆ ಅಧಿಕೃತವಾಗಿ ಭಕ್ತಾದಿಗಳಿಗೆ ಕಾದಿರಿಸಿದ ಸೇವೆಗಳನ್ನು ನಡೆಸುವ ವಿಚಾರವಾಗಿ ಪ್ರಥಮ ಆದ್ಯತೆ ನೀಡಿ ತಿಳಿಸಲಾಗುವುದು.
ಸರಕಾರದ ಆದೇಶದಂತೆ ಶ್ರೀ ದೇವಳದಲ್ಲಿ ಶ್ರೀ ದೇವರಿಗೆ ನಡೆಯತಕ್ಕ ದೈನಂದಿನ ಪೂಜಾದಿ ವಿನಿಯೋಗಗಳು ಹಾಗೂ ಪಂಚಪರ್ವಾದಿ ವಿಶೇಷ ಕಟ್ಲೆಯ ಉತ್ಸವಗಳು ಸಹಿತ ಸಂಬಂಧಪಟ್ಟ ಅರ್ಚಕಾದಿ ಸಿಬ್ಬಂದಿಗಳ ಮೂಲಕ ದೇವಳದ ಒಳಾಂಗಣ ಮತ್ತು ಹೊರಾಂಗಣಕ್ಕೆ ಮಾತ್ರ ಸೀಮಿತಗೊಳಿಸಿ ನೆರವೇರಿಸಲ್ಪಡುತ್ತದೆ. ಯಾವುದೇ ಸಾರ್ವಜನಿಕ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಪು: ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ: ಶಾಸಕ ಲಾಲಾಜಿ -Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…