Featured

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24

ಮಂಗಳೂರು : ಕೊರೊನಾದ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆ ಸರಕಾರದ ನೂತನ ಆದೇಶದ ಪ್ರಕಾರ, ಏಪ್ರಿಲ್ 21ರ ರಾತ್ರಿಯಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಶ್ರೀ ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ವಿಶೇಷ ಉತ್ಸವಾದಿಗಳು ಇರುವುದಿಲ್ಲ. ಹಾಗೂ ದೇವಾಲಯಗಳಲ್ಲಿನ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಹಂಚಿಕೆ ಮಾಡುವುದನ್ನು ರಾತ್ರಿ ಬುಧವಾರ ರಾತ್ರಿ 9 ಗಂಟೆಯಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24

ಶ್ರೀ ದೇವಳದಲ್ಲಿ ಈಗಾಗಲೇ ಭಕ್ತಾದಿಗಳು ಸರ್ಪ ಸಂಸ್ಕಾರ ಸೇವೆ ಹಾಗೂ ಮುಂಗಡವಾಗಿ ಕಾದಿರಿಸಲ್ಪಟ್ಟ ಇನ್ನಿತರ ಯಾವುದೇ ಸೇವೆಗಳನ್ನು ಕೂಡಾ ನಡೆಸುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದ್ದು, ಮುಂದಕ್ಕೆ ಅಧಿಕೃತವಾಗಿ ಭಕ್ತಾದಿಗಳಿಗೆ ಕಾದಿರಿಸಿದ ಸೇವೆಗಳನ್ನು ನಡೆಸುವ ವಿಚಾರವಾಗಿ ಪ್ರಥಮ ಆದ್ಯತೆ ನೀಡಿ ತಿಳಿಸಲಾಗುವುದು.

ಸರಕಾರದ ಆದೇಶದಂತೆ ಶ್ರೀ ದೇವಳದಲ್ಲಿ ಶ್ರೀ ದೇವರಿಗೆ ನಡೆಯತಕ್ಕ ದೈನಂದಿನ ಪೂಜಾದಿ ವಿನಿಯೋಗಗಳು ಹಾಗೂ ಪಂಚಪರ್ವಾದಿ ವಿಶೇಷ ಕಟ್ಲೆಯ ಉತ್ಸವಗಳು ಸಹಿತ ಸಂಬಂಧಪಟ್ಟ ಅರ್ಚಕಾದಿ ಸಿಬ್ಬಂದಿಗಳ ಮೂಲಕ ದೇವಳದ ಒಳಾಂಗಣ ಮತ್ತು ಹೊರಾಂಗಣಕ್ಕೆ ಮಾತ್ರ ಸೀಮಿತಗೊಳಿಸಿ ನೆರವೇರಿಸಲ್ಪಡುತ್ತದೆ. ಯಾವುದೇ ಸಾರ್ವಜನಿಕ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಪು: ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ: ಶಾಸಕ ಲಾಲಾಜಿ -Vishwanews24

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

18 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

26 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

41 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

57 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago