ಮಂಗಳೂರು : ಕೊರೊನಾದ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆ ಸರಕಾರದ ನೂತನ ಆದೇಶದ ಪ್ರಕಾರ, ಏಪ್ರಿಲ್ 21ರ ರಾತ್ರಿಯಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶ್ರೀ ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ವಿಶೇಷ ಉತ್ಸವಾದಿಗಳು ಇರುವುದಿಲ್ಲ. ಹಾಗೂ ದೇವಾಲಯಗಳಲ್ಲಿನ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಹಂಚಿಕೆ ಮಾಡುವುದನ್ನು ರಾತ್ರಿ ಬುಧವಾರ ರಾತ್ರಿ 9 ಗಂಟೆಯಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24
ಶ್ರೀ ದೇವಳದಲ್ಲಿ ಈಗಾಗಲೇ ಭಕ್ತಾದಿಗಳು ಸರ್ಪ ಸಂಸ್ಕಾರ ಸೇವೆ ಹಾಗೂ ಮುಂಗಡವಾಗಿ ಕಾದಿರಿಸಲ್ಪಟ್ಟ ಇನ್ನಿತರ ಯಾವುದೇ ಸೇವೆಗಳನ್ನು ಕೂಡಾ ನಡೆಸುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದ್ದು, ಮುಂದಕ್ಕೆ ಅಧಿಕೃತವಾಗಿ ಭಕ್ತಾದಿಗಳಿಗೆ ಕಾದಿರಿಸಿದ ಸೇವೆಗಳನ್ನು ನಡೆಸುವ ವಿಚಾರವಾಗಿ ಪ್ರಥಮ ಆದ್ಯತೆ ನೀಡಿ ತಿಳಿಸಲಾಗುವುದು.
ಸರಕಾರದ ಆದೇಶದಂತೆ ಶ್ರೀ ದೇವಳದಲ್ಲಿ ಶ್ರೀ ದೇವರಿಗೆ ನಡೆಯತಕ್ಕ ದೈನಂದಿನ ಪೂಜಾದಿ ವಿನಿಯೋಗಗಳು ಹಾಗೂ ಪಂಚಪರ್ವಾದಿ ವಿಶೇಷ ಕಟ್ಲೆಯ ಉತ್ಸವಗಳು ಸಹಿತ ಸಂಬಂಧಪಟ್ಟ ಅರ್ಚಕಾದಿ ಸಿಬ್ಬಂದಿಗಳ ಮೂಲಕ ದೇವಳದ ಒಳಾಂಗಣ ಮತ್ತು ಹೊರಾಂಗಣಕ್ಕೆ ಮಾತ್ರ ಸೀಮಿತಗೊಳಿಸಿ ನೆರವೇರಿಸಲ್ಪಡುತ್ತದೆ. ಯಾವುದೇ ಸಾರ್ವಜನಿಕ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಪು: ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ: ಶಾಸಕ ಲಾಲಾಜಿ -Vishwanews24
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…