ಮಂಗಳೂರು : ಕೊರೊನಾದ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆ ಸರಕಾರದ ನೂತನ ಆದೇಶದ ಪ್ರಕಾರ, ಏಪ್ರಿಲ್ 21ರ ರಾತ್ರಿಯಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶ್ರೀ ದೇವರ ದರ್ಶನ, ಸೇವೆ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ವಿಶೇಷ ಉತ್ಸವಾದಿಗಳು ಇರುವುದಿಲ್ಲ. ಹಾಗೂ ದೇವಾಲಯಗಳಲ್ಲಿನ ವಸತಿಗೃಹ, ಅತಿಥಿ ಗೃಹಗಳನ್ನು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಹಂಚಿಕೆ ಮಾಡುವುದನ್ನು ರಾತ್ರಿ ಬುಧವಾರ ರಾತ್ರಿ 9 ಗಂಟೆಯಿಂದ ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು: ಯುವ ನ್ಯಾಯವಾದಿ ವಿನೋದ್ ಪಾಲ್ ನಿಧನ -Vishwanews24
ಶ್ರೀ ದೇವಳದಲ್ಲಿ ಈಗಾಗಲೇ ಭಕ್ತಾದಿಗಳು ಸರ್ಪ ಸಂಸ್ಕಾರ ಸೇವೆ ಹಾಗೂ ಮುಂಗಡವಾಗಿ ಕಾದಿರಿಸಲ್ಪಟ್ಟ ಇನ್ನಿತರ ಯಾವುದೇ ಸೇವೆಗಳನ್ನು ಕೂಡಾ ನಡೆಸುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದ್ದು, ಮುಂದಕ್ಕೆ ಅಧಿಕೃತವಾಗಿ ಭಕ್ತಾದಿಗಳಿಗೆ ಕಾದಿರಿಸಿದ ಸೇವೆಗಳನ್ನು ನಡೆಸುವ ವಿಚಾರವಾಗಿ ಪ್ರಥಮ ಆದ್ಯತೆ ನೀಡಿ ತಿಳಿಸಲಾಗುವುದು.
ಸರಕಾರದ ಆದೇಶದಂತೆ ಶ್ರೀ ದೇವಳದಲ್ಲಿ ಶ್ರೀ ದೇವರಿಗೆ ನಡೆಯತಕ್ಕ ದೈನಂದಿನ ಪೂಜಾದಿ ವಿನಿಯೋಗಗಳು ಹಾಗೂ ಪಂಚಪರ್ವಾದಿ ವಿಶೇಷ ಕಟ್ಲೆಯ ಉತ್ಸವಗಳು ಸಹಿತ ಸಂಬಂಧಪಟ್ಟ ಅರ್ಚಕಾದಿ ಸಿಬ್ಬಂದಿಗಳ ಮೂಲಕ ದೇವಳದ ಒಳಾಂಗಣ ಮತ್ತು ಹೊರಾಂಗಣಕ್ಕೆ ಮಾತ್ರ ಸೀಮಿತಗೊಳಿಸಿ ನೆರವೇರಿಸಲ್ಪಡುತ್ತದೆ. ಯಾವುದೇ ಸಾರ್ವಜನಿಕ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಪು: ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ: ಶಾಸಕ ಲಾಲಾಜಿ -Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…