Featured

ಕೊರೊನಾ-ಒಮಿಕ್ರಾನ್ ಭೀತಿ :  ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ.. Vishwanewsws24

ಕೊರೊನಾ-ಒಮಿಕ್ರಾನ್ ಭೀತಿ :  ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ..

ನೈಟ್‌ ಕರ್ಫ್ಯೂ ಮುಂದುವರಿಕೆ – Vishwanews24

ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು ಸಭೆಯ ಮುಖ್ಯಾಂಶಗಳನ್ನು ಮಾಧ್ಯಮಗಳಿಗೆ ವಿವರಿಸಿದರು.

ಬೆಂಗಳೂರಿನಲ್ಲಿ ಈಗ 3048 ಸೋಂಕಿತರು 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. ಮಹಾರಾಷ್ಟ್ರದಲ್ಲಿ 10 ಸಾವಿರ ಕೇಸ್ ಆಗಿದೆ. ಆದ್ದರಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ನಿಯಮಗಳನ್ನು ಜಾರಿ ಮಾಡುವ ಅಗತ್ಯ ಇದೆ. ಆದ್ದರಿಂದ ಸಭೆಯಲ್ಲಿ ಚರ್ಚೆ ನಡೆಸಿ ಕೆಲವು ನಿರ್ಧಾರ ಮಾಡಿದ್ದೇವೆ ಎಂದು ಆರ್ ಅಶೋಕ್ ತಿಳಿಸಿದರು.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು. ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ. ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

16 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

16 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

17 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

17 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

17 hours ago