ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂ ಕರೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಜನ ಮನೆಯಲ್ಲೇ ಇದ್ದಾರೆ. ಈ ರೀತಿಯ ಕರ್ಫ್ಯೂ ಈಗಾಗಲೇ ರಾಜ್ಯದಲ್ಲಿ ಜಾರಿ ಇದೆ. ಇದನ್ನೇ ಮೋದಿಯವರು ವಿಶೇಷವಾಗಿ ಹೇಳುವುದೇನು ಇಲ್ಲ. ಈ ಬಗ್ಗೆ ಜನರಿಗೆ ಈಗಾಗಲೇ ಗೊತ್ತಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರು ಕೇವಲ ಭಾಷಣ ಮಾಡಿದ್ದಾರೆ. ಅವರ ಭಾಷಣದಲ್ಲಿ ಏನೇನೂ ಸತ್ವ ಇಲ್ಲ. ಕೊರೊನಾ ತಡೆಗೆ ಮೋದಿಯವರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಹೇಳಿಲ್ಲ. ಪರಿಹಾರ ಏನೂ ಸೂಚಿಸಿಲ್ಲ. ಕೇಂದ್ರದಿಂದ ಕೈಗೊಳ್ಳುವ ತುರ್ತು ಕ್ರಮಗಳ ಕುರಿತು ಬೆಳಕು ಚೆಲ್ಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಬೇರೆ ದೇಶಗಳು ಕೊರೋನಾ ತಡೆಗೆ ಸಾಕಷ್ಟು ಹಣ ಬಿಡುಗಡೆ ಮಾಡುತ್ತಿವೆ. ಆದರೆ ಕೇಂದ್ರ ಸರ್ಕಾರ ಯಾವುದೇ ಪ್ಯಾಕೇಜ್ ಕೊಟ್ಟಿಲ್ಲ. ಬರೇ ಭಾಷಣ ಮಾಡುವುದರಿಂದ ಕೊರೋನಾ ಸಮಸ್ಯೆ ಸ್ಥಗಿತಗೊಳ್ಳುವುದಿಲ್ಲ ಎಂದು ಟೀಕಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…