ನವದೆಹಲಿ: ಕೋವಿಡ್ 19ನಿಂದ ಭಯಪಡುವ ಅಗತ್ಯವಿಲ್ಲ, ಕರೊನಾಗೆ ಭಾರತದಲ್ಲೇ ಲಸಿಕೆ ಸಿದ್ಧವಾಗುತ್ತಿದ್ದು ಶೀಘ್ರದಲ್ಲೇ ಔಷಧಿ ಜನರ ಕೈ ಸೇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಧೈರ್ಯ ತುಂಬಿದರು.
ಇಂದು 74ನೇ ಸ್ವಾತಂತ್ರ್ಯೋತ್ಸವ ವೇಳೆ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೊನಾವು ಇಡೀ ದೇಶಕ್ಕೆ ವಿಶೇಷ ಪರಿಸ್ಥಿತಿಯನ್ನು ತಂದಿದ್ದು ದೇಶದ ಉಜ್ವಲ ಭವಿಷ್ಯಕ್ಕೆ ಅಡ್ಡಿಯಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಸುದೀರ್ಘ ಸಮಯದಿಂದ ಸೇವೆ ಸಲ್ಲಿಸುತ್ತಿರುವ ಯೋಧರ ಹೋರಾಟ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಇನ್ನು ಕೊರೊನಾಗೆ ಯಾವುದೇ ಭಯಪಡುವ ಅಗತ್ಯವಿಲ್ಲ, ಅದಕ್ಕೆ ಭಾರತದಲ್ಲೇ ಲಸಿಕೆ ಸಿದ್ಧವಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ಲಸಿಕೆಗಳು ತಯಾರುತ್ತಿದ್ದು, ಲ್ಯಾಬ್ಗಳಲ್ಲಿ ಸಂಶೋಧನೆ ನಡೆಯುತ್ತಿದೆ. ಶೀಘ್ರದಲ್ಲೇ ಜನರ ಕೈಗೆ ಕರೊನಾ ಔಷಧಿ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.
ಕೊರೊನಾ ವಿರುದ್ಧವೂ ಭಾರತ ತನ್ನ ಸಾಮೂಹಿಕ ಶಕ್ತಿಯನ್ನು ತೋರಿಸಿದ್ದು, ಭಾರತದ ಪ್ರತಿಯೊಬ್ಬರಿಗೂ ಆತ್ಮನಿರ್ಭರ ಮಂತ್ರವಾಗಿದೆ. ಇನ್ನೊಂದೆಡೆ ಕೊರೊನಾದ ನಡುವೆ ದೇಶವು ಅನೇಕ ಪ್ರಾಕೃತಿಕ ವಿಕೋಪಗಳನ್ನು ಎದುರಿಸುವಂತಾಗಿದೆ. ಇನ್ನು ದೇಶದ 130 ಕೋಟಿ ಜನರ ಸಂಕಲ್ಪದಿಂದಾಗಿ ಕೊರೊನಾವನ್ನು ಜಯಸಿದ್ದೇವೆ ಎಂದರು.
ಕೊರೊನಾ ಸಂದರ್ಭದಲ್ಲೂ ಆತ್ಮನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ. ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೆ, ಸಾಧಿಸಿಯೇ ತೀರುತ್ತದೆ. ಭಾರತವು ಆತ್ಮ ನಿರ್ಭರ ಭಾರತದ ಕನಸನ್ನುಸಾಕಾರಗೊಳಿಸುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…