ಬೆಂಗಳೂರು: ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಸಿಎಂ ಕೂಡಾ ಸಭೆ ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಕ್ಲೋಸ್ ಮಾಡೊಲ್ಲ ಎಂದು ಸ್ಪಷ್ಟ ಪಡಿಸಿದರು.
ಮೇ 2ನೇ ವಾರ ಎಸ್ಎಸ್ಎಲ್ಸಿ ಫಲಿತಾಂಶ: ಪಿಯುಸಿ ಪರೀಕ್ಷೆಗಳು ಉತ್ತಮವಾಗಿ ನಡೆಯುತ್ತಿದೆ. ಉತ್ತಮ ಹಾಜರಾತಿ ಇದೆ. ಜೊತೆಗೆ ಎಸ್ಎಸ್ಎಲ್ಸಿ ಮೌಲ್ಯಮಾಪನ ಉತ್ತಮವಾಗಿ ನಡೆಯುತ್ತಿದೆ. ಹೀಗೆ ನಡೆದರೆ ಮೇ 2ನೇ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ನೀಡುತ್ತೇವೆ ಎಂದು ತಿಳಿಸಿದರು.
ಶಾಲೆಯಲ್ಲಿ ಧರ್ಮದ ಬುಕ್ ಓದಿ ಅಂತ ಹೇಳುವ ಹಾಗಿಲ್ಲ: ಕ್ಲಾರೆನ್ಸ್ ಶಾಲೆ ಬೈಬಲ್ ಕಡ್ಡಾಯ ನಿಯಮವು ಸರ್ಕಾರದ ನಿಯಮಕ್ಕೆ ವಿರೋಧವಾಗಿದೆ. ಈ ಶಾಲೆ ತಪ್ಪು ಮಾಡಿದೆ. ಶಿಕ್ಷಣ ಇಲಾಖೆ ಮೂಲಕ ನೋಟಿಸ್ ನೀಡಲಾಗಿದೆ. ಡಿಡಿಪಿಐ, ಬಿಇಓ ಮೂಲಕ ನೋಟಿಸ್ ನೀಡಲಾಗಿದೆ. ಆ ಶಾಲೆ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸೋಮವಾರ ಶಾಲೆಗೆ ನೋಟಿಸ್ ನೀಡಲಾಗಿದೆ. ಕೂಡಲೇ ಲೀಗಲ್ ಪ್ರೊಸೆಸ್ ಮಾಡುತ್ತೇವೆ. ಸಿಬಿಎಸ್ಇ ಬೋರ್ಡ್ಗೂ ಈ ಬಗ್ಗೆ ಬರೆಯುತ್ತೇವೆ. ಯಾವ ಶಾಲೆಯೂ ಕೂಡಾ ಧರ್ಮದ ಬುಕ್ ಓದಿ ಅಂತ ಹೇಳುವ ಹಾಗೆ ಇಲ್ಲ. ರಾಜ್ಯ ಸರ್ಕಾರ ಎನ್ಓಸಿ ನೀಡುತ್ತದೆ. ಶಿಕ್ಷಣ ಇಲಾಖೆ ನಿಯಮದ ಅಡಿಯಲ್ಲಿ ಶಾಲೆ ಕೆಲಸ ನಿರ್ವಹಣೆ ಮಾಡಬೇಕು ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…