ಬೆಂಗಳೂರು: ಜನರು ಆತ್ಮವಿಶ್ವಾಸದಿಂದ ಇರಿ ಸರ್ಕಾರ ನಿಮ್ಮ ಜೊತೆಗೆ ಇದೆ. ಮುಖ್ಯಮಂತ್ರಿಯಿಂದ ಕಟ್ಟಕಡೆಯ ಅಧಿಕಾರಿಗಳು ನಿಮ್ಮ ಜೊತೆಗೆ ಇರುತ್ತೇವೆ. ನಿಮ್ಮ ಆರೋಗ್ಯ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಭರವಸೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 247*7 ಕಾಲ್ ಸೆಂಟರ್ ತೆರೆಯಲಾಗಿದೆ. ಹೋರಾಟ ಮಧ್ಯೆ ಇದ್ದೇವೆ ನಾವೆಲ್ಲರೂ ಒಟ್ಟಿಗೆ ಸೇರಿ ಹೋರಾಟ ನಡೆಸಬೇಕಿದೆ. ಎಲ್ಲರ ಜೊತೆಗೆ ಸಭೆ ನಡೆಸುತ್ತೇನೆ. 2000 ಐಸಿಯು ಮಾಡಿಲರ್ ಐಸಿಯು ಬೆಂಗಳೂರಿನ 8 ವಲಯದಲ್ಲಿ ಕಾರ್ಯರಂಭವಾಗಲಿದ್ದು, ಆಕ್ಸಿಜನ್ ಕೊಡುವ ತಂತ್ರಜ್ಞಾನ ಒಂದು ವಾರದಲ್ಲಿ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ರಾಜ್ಯದಲ್ಲಿ 48 ಗಂಟೆಯಲ್ಲಿ ಎಲ್ಲೂ ಆಕ್ಸಿಜನ್ ಕೊರತೆಯಾಗಿಲ್ಲ. ಜನರಲ್ಲಿ ವಿಶ್ವಾಸ ಮೂಡಿಸಬೇಕು. ಅಂಬುಲೆನ್ಸ್ ವಸೂಲಿ ವಿಚಾರ ಸರ್ಕಾರದಿಂದ ದರ ನಿಗದಿಯಾಗಲಿದೆ. ಸುಲುಗೆಕೋರರ ವಿರುದ್ಧ ಕ್ರಮ 108 ಅಂಬುಲೆನ್ಸ್ ಬಳಕೆ ಮಾಡಿಕೊಳ್ಳಲು ಮನವಿ ಮಾಡಿಕೊಂಡ ಸಚಿವರು, ಖಾಸಗಿ ಅಂಬುಲೆನ್ಸ್ ಗಳಿಗೂ ದರ ನಿಗದಿ ಮಾಡುವ ನಿರ್ಧಾರ ಮಾಡುವುದಾಗಿ ತಿಳಿಸಿದರು.
ರೋಗದ ಲಕ್ಷಣಗಳು ಕಂಡ ಕೂಡಲೇ ಟೆಸ್ಟ್ ಮಾಡಿಸಿ ವೈದ್ಯರ ಸಲಹೆ ಪಡೆಯಿರಿ. ನಮ್ಮ ಲಸಿಕೆ ಉತ್ತಮ ಕೆಲಸ ಮಾಡುತ್ತಿದೆ. ಎಲ್ಲರನ್ನ ರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ. ಕೊರೊನಾ ಪಾಸಿಟಿವ್ ಬಂದ್ರೆ ಹೆದರಬೇಡಿ, ಧೃತಿಗೆಡಬೇಡಿ ಧೈರ್ಯದಿಂದ ಇರಿ. ಮಾಜಿ ಸಚಿವ ಎಂಬಿ ಪಾಟೀಲ್ ಆಸ್ಪತ್ರೆಯಲ್ಲಿ ಉತ್ತಮ ಕೆಲಸ ನಡೆಯುತ್ತಿದೆ, ಸರ್ಕಾರಕ್ಕೆ ಜನರಿಗೆ ಸ್ಪಂದಿಸಿ ಉತ್ತಮ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಇದೇ ವೇಳೆ ಸಚಿವರು ಶ್ಲಾಘಿಸಿದರು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…