ಮೈಸೂರು: ಜಿಲ್ಲೆಯಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಏಪ್ರಿಲ್ 10 ರಿಂದ ಕೆಲವು ಟಫ್ ರೂಲ್ಸ್ ಗಳನ್ನು ಹಾಕಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಂದಾಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ, ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ಹಲವು ರಜೆಗಳು ಇರುವುದರಿಂದಾಗಿ ಮೈಸೂರಿಗೆ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಈ ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಹಾಗಾಗಿ ಮೈಸೂರಲ್ಲಿ ಕೆಲವು ಟಫ್ ರೂಲ್ಸ್ ಗಳನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದರು.
ಜಿಲ್ಲೆಯಲ್ಲಿ ಕೊರೊನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಡಳಿತ ಕೆಲವು ಕ್ರಮಕ್ಕೆ ಮುಂದಾಗಿದ್ದು, ಈ ಪ್ರಕಾರ ಏಪ್ರಿಲ್ 10 ರಿಂದ ಏಪ್ರಿಲ್ 20ರ ವರೆಗೆ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಹೋಗಲು, ಚಿತ್ರಮಂದಿರಗಳಿಗೆ ತೆರಳಲು ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.
ನಾವು ಮೈಸೂರಿನಲ್ಲಿರುವ ಯಾವುದೇ ಪ್ರವಾಸಿತಾಣಗಳನ್ನು ಮುಚ್ಚುತಿಲ್ಲ ಬದಲಾಗಿ ಕೆಲವು ನಿಯಮಗಳನ್ನು ಜಾರಿಗೆ ತಂದಿದ್ದೇವೆ. ರಜೆಯ ಇರುವುದರಿಂದಾಗಿ ಪ್ರವಾಸಿಗರು ಬರುವ ನಿರೀಕ್ಷೆ ಇದ್ದು ಈ ಸಂದರ್ಭ ಜನ ಸಂದಣಿ ಜಾಸ್ತಿ ಇರುವ ಪ್ರದೇಶಗಳಲ್ಲಿ ನಿಗಾ ವಹಿಸಲಾಗುವುದು, ಈ ಎಲ್ಲಾ ಕಾರ್ಯಗಳಿಗಾಗಿ ಈಗಾಗಲೇ ಜಿಲ್ಲೆಯಲ್ಲಿ 300 ಹೋಂ ಗಾರ್ಡ್ಗಳನ್ನು ನೇಮಕ ಮಾಡಿದ್ದೇವೆ. ಮೈಸೂರಿಗೆ ಪ್ರವಾಸಕ್ಕೆ ಬರುವವರು ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂದು ಪ್ರವಾಸಿಗರಿಗೆ ಮನವಿ ಮಾಡಿಕೊಂಡರು.
ಅದೇ ರೀತಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಸಭೆ ಸಮಾರಂಭಗಳಿಗೆ ಪೊಲೀಸ್ ಇಲಾಖೆಯಿಂದ ಒಪ್ಪಿಗೆ ಪಡೆದುಕೊಂಡು ಸಮಾರಂಭಗಳನ್ನು ನಡೆಸಬೇಕೆಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಂಡರು.
KSRTC ನೌಕರರ ಮುಷ್ಕರ:ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ : ಸಿದ್ದರಾಮಯ್ಯ -Vishwanews24
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…