ಕೊರೊನಾ : ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ’ : ಸುಧಾಕರ್ -Vishwanews24

ಕೊರೊನಾ : ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರ ಗುರುತಿಸಲಾಗಿದೆ’ : ಸುಧಾಕರ್ -Vishwanews24

ಬೆಂಗಳೂರು,: ಕೇಂದ್ರ ಸರ್ಕಾರದ ಸೂಚನೆಯಂತೆ ಕೊರೊನಾ ಲಸಿಕೆ ವಿತರಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೊರೊನಾ ಲಸಿಕೆ ವಿತರಣೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಕೊರೊನಾ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಿದ್ದು, ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಗುರುತಿಸಲಾಗಿದೆ ಎಂದರು”.

ಇನ್ನು ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದ್ದು, ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ. ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

23 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago