ಬೆಂಗಳೂರು,: ಕೇಂದ್ರ ಸರ್ಕಾರದ ಸೂಚನೆಯಂತೆ ಕೊರೊನಾ ಲಸಿಕೆ ವಿತರಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕೊರೊನಾ ಲಸಿಕೆ ವಿತರಣೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಕೊರೊನಾ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಿದ್ದು, ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಗುರುತಿಸಲಾಗಿದೆ ಎಂದರು”.
ಇನ್ನು ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದ್ದು, ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ. ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…