ಬೆಂಗಳೂರು : ಹಲವು ದೇಶಗಳಲ್ಲಿ ರೂಪಾಂತರಿ ಕೊರೊನಾ ವೈರಸ್ ಕಾಣಿಸಿಕೊಂಡು ಹಬ್ಬುತ್ತಿರುವ ಹಿನ್ನೆಲೆ ಹಾಗೂ ಅನೇಕ ಕಡೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ವಕ್ಕರಿಸಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳು ಹಾಗೂ ತಜ್ಞರ ಸಭೆ ಕರೆದಿದ್ದಾರೆ.
ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಸಭೆ ಕರೆದಿದ್ದಾರೆ. ಕೊರೊನಾ ತಾಂತ್ರಿಕಾ ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ಬಿಬಿಎಂಪಿಯ ಮುಖ್ಯ ಆಯುಕ್ತರು, ಕಳೆದೊಂದು ವಾರದಿಂದ ಕೊರೊನಾ ಕಾಣಿಸಿಕೊಂಡಿರುವ ಜಿಲ್ಲೆಗಳು ಸೇರಿದಂತೆ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ಅಧಿಕಾರಿಗಳು, ಆರೋಗ್ಯ ಇಲಾಖೆ ಆಯುಕ್ತರು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
“ಕೊರೊನಾ ಮೂರನೇ ಅಲೆ ಉಲ್ಬಣವಾಗದಂತೆ ಕ್ರಮ ಕೈಗೊಳ್ಳಲು ಇಂದಿನ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆ ಇದೆ. ಏನೇನು ಕ್ರಮ ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಡು ಜನತೆಗೆ ತಿಳಿಸುತ್ತೇನೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…