ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಕಠಿಣ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಇನ್ನು ಮುಂದೆ ದಿನಸಿ ಅಂಗಡಿಗಳು, ತರಕಾರಿ ಮಾರುಕಟ್ಟೆ, ಹೋಲ್ಸೇಲ್ ಮಾರ್ಕೆಟ್, ಮಾಲ್ಗಳಿಗೆ ಹೋಗುವವರಿಗೆ ರಾಜ್ಯ ಆರೋಗ್ಯ ಇಲಾಖೆ ಟಫ್ ರೂಲ್ಸ್ ಜಾರಿಗೆ ತಂದಿದೆ.
ಶೀತ, ಕೆಮ್ಮು, ಜ್ವರದ ಲಕ್ಷಣದವು ಅಂಗಡಿ-ಮಳಿಗೆಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಅಂಗಡಿ-ಮಾಲ್ಗಳ ಪ್ರವೇಶ ದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ನಡೆಸಿ ರೋಗ ಲಕ್ಷಣ ಇಲ್ಲದವರನ್ನು ಒಳಗೆ ಬಿಡುವಂತೆ ಹೊಸ ಗೈಡ್ಲೈನ್ಸ್ನಲ್ಲಿ ಸೂಚಿಸಲಾಗಿದೆ.
ಕೊರೊನಾ 2ನೇ ಅಲೆ ಹರಡುವುದನ್ನು ತಡೆಯಲು ಹಾಗೂ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆ, ಮಾಲ್ಗಳಲ್ಲಿ ಜನಸಂದಣಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಹೊಸ ಗೈಡ್ಲೈನ್ಸ್ನ ಪ್ರಮುಖ ಅಂಶಗಳು..
1. ಕಡ್ಡಾಯವಾಗಿ 6 ಅಡಿ ಅಥವಾ 2ಮೀಟರ್ ಸಾಮಾಜಿಕ ಅಮತರ ಕಾಯ್ದುಕೊಳ್ಳಬೇಕು. ಅಂಗಡಿ-ಮಾಲ್ಗಳಲ್ಲಿ ಗಾಳಿ-ಬೆಳಕಿಗೆ ಸೂಕ್ತ ವ್ಯವಸ್ಥೆ ಮಾಡಬೇಕು.
2. ಈ ರೀತಿಯ ವ್ಯವಸ್ಥೆ ಇಲ್ಲದ ಅಂಗಡಿ-ಮಾಲ್ಗಳು ಬದಲಾವಣೆ ಮಾಡಿಕೊಳ್ಳಬೇಕು.
3. ಅಂಗಡಿ ಅಥವಾ ಮಾಲ್ಗಳ ಮುಂದೆ ದೈಹಿತ ಅಂತರ ಕಾಯ್ದುಕೊಳ್ಳಲು ವೃತ್ತಾಕಾರದ ಮಾರ್ಕ್ಗಳನ್ನು ಹಾಕಬೇಕು
4. ಪ್ರತಿದಿನ ದೈನಂದಿನ ವ್ಯಾಪಾರ ಆರಂಭಿಸುವ ಮೊದಲು ಅಂಗಡಿ-ಮಾಲ್ಗಳನ್ನು ಸ್ಯಾನಿಟೈಸ್ ಮಾಡಬೇಕು.
5. ಅಂಡಗಿ-ಮಾಲ್ಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಬಾಟಲಿ ಇಡಬೇಕು
6. ಪಾರ್ಕಿಂಗ್ನಲ್ಲಿ ನಿಲ್ಲಿಸಿದ ಕಾರುಗಳನ್ನು ಸ್ಯಾನಿಟೈಸ್ ಮಾಡಿಯೇ ಬಳಸಬೇಕು.
7. ಮಕ್ಕಳು, ಹಿರಿಯ ನಾಗಕರಿರು ಮಾರುಕಟ್ಟೆ-ಮಾಲ್ಗಳಿಗೆ ಪ್ರವೇಶ ನಿಷೇಧಿಸಬೇಕು
8. ಮಾಲ್ಗಳಿಗೆ ಬರುವವರು ಮಾಸ್ಕ್ ಜತೆಗೆ ಕೈಗಳಿಗೆ ಹ್ಯಾಂಡ್ ಗ್ಲೌಸ್ ಹಾಕಿಕೊಳ್ಳಬೇಕು
9. ಕೆಮ್ಮುವಾಗ, ಸೀನುವಾಗ ಮೂಗನ್ನು ಟಿಶ್ಯೂ ಪೇಪರ್ ಅಥವಾ ಕರ್ಚೀಪ್ ಬಳಸುವಂತೆ ನೋಡಿಕೊಳ್ಳಬೇಕು.
10. ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಉಗುಳುವುದನ್ನು ನಿಷೇಧಿಸಲಾಗಿದೆ
11. ಮಾಸ್ಕ್ ಧರಿಸದೇ ಬರುವವರಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಬೇಕು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…