ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಕಠಿಣ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಇನ್ನು ಮುಂದೆ ದಿನಸಿ ಅಂಗಡಿಗಳು, ತರಕಾರಿ ಮಾರುಕಟ್ಟೆ, ಹೋಲ್ಸೇಲ್ ಮಾರ್ಕೆಟ್, ಮಾಲ್ಗಳಿಗೆ ಹೋಗುವವರಿಗೆ ರಾಜ್ಯ ಆರೋಗ್ಯ ಇಲಾಖೆ ಟಫ್ ರೂಲ್ಸ್ ಜಾರಿಗೆ ತಂದಿದೆ.
ಶೀತ, ಕೆಮ್ಮು, ಜ್ವರದ ಲಕ್ಷಣದವು ಅಂಗಡಿ-ಮಳಿಗೆಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಅಂಗಡಿ-ಮಾಲ್ಗಳ ಪ್ರವೇಶ ದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ನಡೆಸಿ ರೋಗ ಲಕ್ಷಣ ಇಲ್ಲದವರನ್ನು ಒಳಗೆ ಬಿಡುವಂತೆ ಹೊಸ ಗೈಡ್ಲೈನ್ಸ್ನಲ್ಲಿ ಸೂಚಿಸಲಾಗಿದೆ.
ಕೊರೊನಾ 2ನೇ ಅಲೆ ಹರಡುವುದನ್ನು ತಡೆಯಲು ಹಾಗೂ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆ, ಮಾಲ್ಗಳಲ್ಲಿ ಜನಸಂದಣಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಹೊಸ ಗೈಡ್ಲೈನ್ಸ್ನ ಪ್ರಮುಖ ಅಂಶಗಳು..
1. ಕಡ್ಡಾಯವಾಗಿ 6 ಅಡಿ ಅಥವಾ 2ಮೀಟರ್ ಸಾಮಾಜಿಕ ಅಮತರ ಕಾಯ್ದುಕೊಳ್ಳಬೇಕು. ಅಂಗಡಿ-ಮಾಲ್ಗಳಲ್ಲಿ ಗಾಳಿ-ಬೆಳಕಿಗೆ ಸೂಕ್ತ ವ್ಯವಸ್ಥೆ ಮಾಡಬೇಕು.
2. ಈ ರೀತಿಯ ವ್ಯವಸ್ಥೆ ಇಲ್ಲದ ಅಂಗಡಿ-ಮಾಲ್ಗಳು ಬದಲಾವಣೆ ಮಾಡಿಕೊಳ್ಳಬೇಕು.
3. ಅಂಗಡಿ ಅಥವಾ ಮಾಲ್ಗಳ ಮುಂದೆ ದೈಹಿತ ಅಂತರ ಕಾಯ್ದುಕೊಳ್ಳಲು ವೃತ್ತಾಕಾರದ ಮಾರ್ಕ್ಗಳನ್ನು ಹಾಕಬೇಕು
4. ಪ್ರತಿದಿನ ದೈನಂದಿನ ವ್ಯಾಪಾರ ಆರಂಭಿಸುವ ಮೊದಲು ಅಂಗಡಿ-ಮಾಲ್ಗಳನ್ನು ಸ್ಯಾನಿಟೈಸ್ ಮಾಡಬೇಕು.
5. ಅಂಡಗಿ-ಮಾಲ್ಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಬಾಟಲಿ ಇಡಬೇಕು
6. ಪಾರ್ಕಿಂಗ್ನಲ್ಲಿ ನಿಲ್ಲಿಸಿದ ಕಾರುಗಳನ್ನು ಸ್ಯಾನಿಟೈಸ್ ಮಾಡಿಯೇ ಬಳಸಬೇಕು.
7. ಮಕ್ಕಳು, ಹಿರಿಯ ನಾಗಕರಿರು ಮಾರುಕಟ್ಟೆ-ಮಾಲ್ಗಳಿಗೆ ಪ್ರವೇಶ ನಿಷೇಧಿಸಬೇಕು
8. ಮಾಲ್ಗಳಿಗೆ ಬರುವವರು ಮಾಸ್ಕ್ ಜತೆಗೆ ಕೈಗಳಿಗೆ ಹ್ಯಾಂಡ್ ಗ್ಲೌಸ್ ಹಾಕಿಕೊಳ್ಳಬೇಕು
9. ಕೆಮ್ಮುವಾಗ, ಸೀನುವಾಗ ಮೂಗನ್ನು ಟಿಶ್ಯೂ ಪೇಪರ್ ಅಥವಾ ಕರ್ಚೀಪ್ ಬಳಸುವಂತೆ ನೋಡಿಕೊಳ್ಳಬೇಕು.
10. ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಉಗುಳುವುದನ್ನು ನಿಷೇಧಿಸಲಾಗಿದೆ
11. ಮಾಸ್ಕ್ ಧರಿಸದೇ ಬರುವವರಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಬೇಕು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…