Featured

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಹಾಗೂ ಪ್ರತಿಕಾಯಗಳನ್ನು ಹೊಂದಿರುವವರಿಗೆ ಮಾತ್ರ ಮೆಕ್ಕಾ, ಮದಿನಾ ಯಾತ್ರೆಗೆ ಅವಕಾಶ : ಸೌದಿ ಅರೇಬಿಯಾ -Vishwanews24

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಹಾಗೂ ಪ್ರತಿಕಾಯಗಳನ್ನು ಹೊಂದಿರುವವರಿಗೆ ಮಾತ್ರ ಮೆಕ್ಕಾ, ಮದಿನಾ ಯಾತ್ರೆಗೆ ಅವಕಾಶ : ಸೌದಿ ಅರೇಬಿಯಾ -Vishwanews24

ರಿಯಾದ್ (Vishwanews24 ) : ಕೊರೊನಾ ಲಸಿಕೆ ಹಾಕಿಸಿಕೊಂಡವರು ಹಾಗೂ ಪ್ರತಿಕಾಯಗಳನ್ನು ಹೊಂದಿರುವವರಿಗೆ ಮಾತ್ರ ಮೆಕ್ಕಾ, ಮದಿನಾ ಸೇರಿ ಪವಿತ್ರ ಕ್ಷೇತ್ರಗಳ ಯಾತ್ರೆಗೆ ಅವಕಾಶ ನೀಡುತ್ತೇವೆ ಎಂದು ಸೌದಿ ಅರೇಬಿಯಾ ಸರ್ಕಾರ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ (ಯಾತ್ರೆ) ಸಚಿವಾಲಯ, ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಈಗಾಗಲೇ ಪಡೆದಿರುವವರು, ಮೊದಲ ಡೋಸ್ ಪಡೆದು ಕನಿಷ್ಠ 14 ದಿನ ಕಳೆದಿರುವವರು ಈಗಾಗಲೇ ಕೊರೊನಾ ಸೋಂಕು ದೃಢಪಟ್ಟು ಗುಣಮುಖರಾಗಿರುವವರನ್ನು ಪ್ರತಿಕಾಯಗಳನ್ನು ಹೊಂದಿದವರು ಎಂದು ಪರಿಗಣನೆ ಮಾಡಲಾಗುವುದು. ಇವರಿಗೆ ಈ ಪವಿತ್ರ ರಂಜಾನ್‌ ತಿಂಗಳಿನಲ್ಲಿ ಆರಂಭವಾಗುವ ಮೆಕ್ಕಾ, ಮದಿನಾ ಯಾತ್ರೆಗೆ ಅವಕಾಶ ನೀಡಲಾಗುವುದು. ಹಾಗೆಯೇ ಈ ನಿಯಮ ರಂಜಾನ್‌ ತಿಂಗಳ ಆರಂಭದಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ಭಾರತದ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಎನ್. ವಿ. ರಮಣ ನೇಮಕ -Vishwanews24

ಇನ್ನು ಈ ನಿಯಮವು ಎಲ್ಲಿಯವರೆಗೆ ಜಾರಿಯಲ್ಲಿ ಇರಲಿದೆ ಹಾಗೂ ವರ್ಷದ ಕೊನೆಯ ಹಜ್‌ ಯಾತ್ರೆಗೂ ಇದು ಅನ್ವಯವಾಗಲಿದೆಯೇ ಎಂಬುದನ್ನು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ (ಯಾತ್ರೆ) ಸಚಿವಾಲಯ ಖಚಿತಪಡಿಸಿಲ್ಲ.

ಸೌದಿ ಅರೇಬಿಯಾದಲ್ಲಿ 3,93,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು 6,700 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಸರ್ಕಾರ 50 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಲಸಿಕೆ ನೀಡಿದೆ.

ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

11 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

11 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

16 hours ago