ಬೆಂಗಳೂರು: ಕೊರೊನಾ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರ ಮನವೊಲಿಸಲಾಗುತ್ತದೆಯೇ ಹೊರತು ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾ ತಾಂತ್ರಿಕ ಸಲಹಾ ಸಮಿತಿ ಎರಡು ಡೋಸ್ ಲಸಿಕೆ ಪಡೆಯದವರಿಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಕಡಿತ ಮಾಡಬೇಕು ಮತ್ತು ದಂಡ ಹಾಕಬೇಕು ಎಂಬ ಸಲಹೆಗಳನ್ನು ನೀಡಿತ್ತು. ಆದರೆ ಸರ್ಕಾರ ಹಾಗೆ ಮಾಡುವುದಿಲ್ಲ. ಬದಲಿಗೆ ಲಸಿಕೆ ಪಡೆಯದಿರುವವರ ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುತ್ತದೆ” ಎಂದರು.
ಇನ್ನು ಕೊರೊನಾ ಪ್ರಕರಣಗಳು ಹೆಚ್ಚುವುದನ್ನು ತಡೆಯಲು ಟೆಲಿಮೆಡಿಸಿನ್, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಸರ್ಕಾರದ ಜತೆಗೆ ಕೈ ಜೋಡಿಸಿದರೆ ಕೊರೊನಾದಿಂದ ಹೊರಬರಬಹುದು” ಎಂದು ಹೇಳಿದ್ದಾರೆ .
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…