ಬೆಂಗಳೂರು: ಕೊರೊನಾ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರ ಮನವೊಲಿಸಲಾಗುತ್ತದೆಯೇ ಹೊರತು ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೊರೊನಾ ತಾಂತ್ರಿಕ ಸಲಹಾ ಸಮಿತಿ ಎರಡು ಡೋಸ್ ಲಸಿಕೆ ಪಡೆಯದವರಿಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಕಡಿತ ಮಾಡಬೇಕು ಮತ್ತು ದಂಡ ಹಾಕಬೇಕು ಎಂಬ ಸಲಹೆಗಳನ್ನು ನೀಡಿತ್ತು. ಆದರೆ ಸರ್ಕಾರ ಹಾಗೆ ಮಾಡುವುದಿಲ್ಲ. ಬದಲಿಗೆ ಲಸಿಕೆ ಪಡೆಯದಿರುವವರ ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುತ್ತದೆ” ಎಂದರು.
ಇನ್ನು ಕೊರೊನಾ ಪ್ರಕರಣಗಳು ಹೆಚ್ಚುವುದನ್ನು ತಡೆಯಲು ಟೆಲಿಮೆಡಿಸಿನ್, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಸರ್ಕಾರದ ಜತೆಗೆ ಕೈ ಜೋಡಿಸಿದರೆ ಕೊರೊನಾದಿಂದ ಹೊರಬರಬಹುದು” ಎಂದು ಹೇಳಿದ್ದಾರೆ .
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…