ಬೆಂಗಳೂರು : ”ಶವ ಸಂಸ್ಕಾರ ಮಾಡುವ ಸ್ಥಳದಲ್ಲೂ ಪೊಲೀಸರನ್ನು ನೇಮಿಸುತ್ತೇವೆ” ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೊನಾ ಸೋಂಕು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಅಧಿಕವಾಗುತ್ತಿದೆ. ಮೃತರ ಅಂತ್ಯಕ್ರಿಯೆಗೆ ಸಮಸ್ಯೆ ಉಂಟಾಗಿದೆ. ಶವಸಂಸ್ಕಾರಕ್ಕೂ ಸಾಲು ನಿಲ್ಲುವ ಸ್ಥಿತಿ ಎದುರಾಗಿದೆ.
ಏತನ್ಮಧ್ಯೆ ಗೃಹ ಸಚಿವ ಬೊಮ್ಮಾಯಿ ಅವರು ”ಶವಸಂಸ್ಕಾರದ ಸ್ಥಳದಲ್ಲೂ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24
”ಈಗಾಗಲೇ ಕಂದಾಯ ಸಚಿವರು ಶವ ಸಂಸ್ಕಾರಕ್ಕೆ ಸ್ಥಳದ ಪರಿಶೀಲನೆ ನಡೆಸಿದ್ದು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಇಂದು ಅಥವಾ ನಾಳೆ ಶವಸಂಸ್ಕಾರ ನಡೆಯುತ್ತದೆ” ಎಂದು ತಿಳಿಸಿದ್ದಾರೆ.
”ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು ಎಲ್ಲಾ ಸಚಿವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ವೇಗವಾಗಿ ಹರಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…