ಕೊರೊನಾ ವೈರಸ್​ಗೆ ಗೋ ಮೂತ್ರವೇ ಔಷಧ : ವಿನಯ್ ಗುರೂಜಿ -Vishwanews24

ಕೊರೊನಾ ವೈರಸ್​ಗೆ ಗೋ ಮೂತ್ರವೇ ಔಷಧ : ವಿನಯ್ ಗುರೂಜಿ

ಹಾಸನ: ಕೊರೊನ ವೈರಸ್‍ಗೆ ಗೋಮೂತ್ರವೇ ಔಷಧವಾಗಿದ್ದು, ಈ ವೈರಸ್ ಬಗ್ಗೆ ಆರು ಸಾವಿರ ವರ್ಷಗಳ ಹಿಂದೆಯೇ ನಮ್ಮ ತಾಳೆಗರಿ ಶಾಸ್ತ್ರದಲ್ಲಿ ಉಲ್ಲೇಖವಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

ಹಾಸನದ ಮಲ್ಲಪ್ಪನಹಳ್ಳಿಯ ಮಲ್ಲಿಕಾರ್ಜುನ ದೇವಾಲಯದ ಶಂಕುಸ್ಥಾಪನೆ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ, ಈ ವಿಷದ ಗಾಳಿಯಿಂದಾಗಿ ಈಶಾನ್ಯ ಭಾರತದಲ್ಲಿ ಮೃತ್ಯು ಸಂಭವಿಸುತ್ತದೆ ಎಂದು ಆ ಗ್ರಂಥದಲ್ಲಿ ಬರೆಯಲಾಗಿತ್ತು. ಬ್ರಹ್ಮೇಂದ್ರ ಅವರು ಬರೆದ ಈ ಗ್ರಂಥದಲ್ಲಿ ರಸ್ತೆ ರಸ್ತೆಯಲ್ಲಿ ಜನ ಸಾಯುತ್ತಾರೆ ಎಂದು ಬರೆಯಲಾಗಿದ್ದು, ಈಗ ಅದೇ ಆಗುತ್ತಿದೆ. ದೇವರು ಇದ್ದಾನೆ ಎಂಬ ನಂಬಿಕೆಯಿಂದ ಭಾರತೀಯ ಜನರು ಬದುಕುತ್ತಿದ್ದಾರೆ ಎಂದರು.

 

 

ಕೊರೊನಾ ವೈರಸ್‍ಗೆ ಔಷಧಿ ಇಲ್ಲ ಎಂದು ಹೇಳುವುದು ಮೂರ್ಖತನ ಎಂದುಕೊಳ್ಳುತ್ತೇನೆ. ಏಕೆಂದರೆ ಗೋಮೂತ್ರದಲ್ಲಿ ಎಲ್ಲದಕ್ಕೂ ಔಷಧಿ ಇದೆ. ಪರಿಸರದಿಂದ ಸಮಸ್ಯೆಗೆ ಪರಿಸರದಿಂದಲೇ ಉತ್ತರ ಸಿಗುತ್ತದೆ. ಸ್ವಲ್ಪ ಹುಡುಕಬೇಕು ಅಷ್ಟೇ. ಎಲ್ಲದಕ್ಕೂ ಎಂಬಿಬಿಎಸ್ ಕೊನೆಯಲ್ಲ. ನಾನು ಎರಡು ವರ್ಷಗಳ ಹಿಂದೆ ಆ ತಾಳೆಗರಿ ಓದಿದಾಗ ವಿಷದ ಗಾಳಿ ಬೀಸುತ್ತೆ ಎಂದು ಉಲ್ಲೇಖವಿದೆ. ಕೊರೊನಾ ವೈರಸ್ ಕೂಡ ಗಾಳಿಯಿಂದ ಹರಡುತ್ತಿದೆ. ಅದು 6 ಸಾವಿರ ವರ್ಷಗಳ ಹಿಂದಿನ ಗ್ರಂಥ ಎಂದು ವಿನಯ್ ಗುರೂಜಿ ತಿಳಿಸಿದರು.

 

ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆ ಎಚ್1ಎನ್1 ಬಂದಾಗ ಅಮೃತಬಳ್ಳಿ ಕೆಲಸ ಮಾಡಿರಲಿಲ್ವಾ? ಹಿಮಾಲಯದಲ್ಲಿ ಋಷಿಗಳಿಗೆ ಆಧ್ಯಾತ್ಮಕ ಶಕ್ತಿ ರಕ್ಷಿಸುತ್ತಿದೆ. ಹಾಗಾಗಿ ಅವರಿಗೆ ಯಾವ ಭಯವಿರುವುದಿಲ್ಲ. ನಮಗೆ ಕಾಣಿಸುತ್ತಿರುವುದು ಅಷ್ಟೇ ಸತ್ಯ ಎಂಬುದು ಭ್ರಾಂತ. ನಮಗೆ ಕಾಣಿಸದಿರುವುದು ಹಲವು ವಿಷಯಗಳಿವೆ. ಸದ್ಯ ಈ ಜಾಗವು ಮುಂದಿನ ದಿನಗಳಲ್ಲಿ ಕೇದಾರನಾಥವಾಗಲಿದೆ. ಈ ಸ್ಥಳಕ್ಕೆ ಮುಂದಿನ ಎರಡು ವರ್ಷಗಳ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

10 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

10 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

13 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

14 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago