ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂವನ್ನು ಹೇರೋದಿಲ್ಲ ಅ ಎಂದು ಹೇಳಿದ್ದಾರೆ.
ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಠಾಕ್ರೆ, ಮಾರ್ಗಸೂಚಿಯನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು. ಇದೇ ವೇಳೆ ಅವರು ಮಾತನಾಡುತ್ತ, ಮುಂದಿನ ಆರು ತಿಂಗಳಕಾಲ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಕರೋನವೈರಸ್ ಹರಡುವಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಖಾಯಿಲೆ ಬರುವುದಕ್ಕಿಂತ ಮುನ್ನ ಅದನ್ನೂ ಬಾರದೇ ಇರುವಂತೆ ನೋಡಿಕೊಳ್ಳವುದು ನಮ್ಮ ಅದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ನಾವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕನಿಷ್ಠ ಆರು ತಿಂಗಳಕಾಲ ಅಭ್ಯಾಸ ಮಾಡಿಕೊಳ್ಳಬೇಕಾಗಿದೆ ಅಂತ ಅಂತ ಅವರು ಹೇಳಿದರು. ಇನ್ನೂ ಇದೇ ವೇಳೆ ಅವರು ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು, ಮೆಟ್ರೋ ಕಾರ್ ಶೆಡ್ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಠಾಕ್ರೆ ಮಾತನಾಡಿದರು. ರಾತ್ರಿ ಕರ್ಫ್ಯೂ ಅಥವಾ ಲಾಕ್ ಡೌನ್ ಅನ್ನು ಹೇರುವುದಕ್ಕೆ ತಜ್ಞರು ಒಲವು ತೋರುತ್ತಿದ್ದಾರೆ ಎಂದು ಸಿಎಂ ಠಾಕ್ರೆ ಹೇಳಿದ್ದು, ಆದರೆ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿರುವುದರಿಂದ ಈ ಕ್ರಮಗಳನ್ನು ಅವರು ಬೆಂಬಲಿಸುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಶನಿವಾರ 3,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು 18,92,707 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈ ಸಾಂಕ್ರಾಮಿಕ ರೋಗ ದಿಂದಾಗಿ 74 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 48,648ಕ್ಕೆ ಏರಿಕೆ ಕಂಡಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…