ಬೆಂಗಳೂರು: ಕೊರೊನಾ ಲಾಕ್ ಡೌನ್ , ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ನೀಡಿದೆ.
ಪ್ರತಿ ಯೂನಿಟ್’ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್’ಗೆ 10 ಪೈಸೆ ಹೆಚ್ಚಳವಾಗಲಿದೆ. ಪರಿಷ್ಕೃತ ದರವು ಏ.1ರಿಂದಲೇ ಪೂರ್ವಾನ್ವಯವಾಗಲಿದ್ದು, ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಏಪ್ರಿಲ್ ಮೇ. ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ವಸೂಲಿ ಮಾಡಲು ಎಸ್ಕಾಂಗಳಿಗೆ ಆದೇಶ ನೀಡಿದೆ.
ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 1.35 ರೂ. ಬೆಲೆ ಏರಿಕೆ ಮಾಡುವಂತೆ ಸರ್ಕಾರಕ್ಕೆ ಈ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶವಾಗಿ ಪರಿಶೀಲಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಇದರಂತೆ ಪ್ರತಿ ಯೂನಿಟ್’ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್’ಗೆ 10 ಪೈಸೆ ಹೆಚ್ಚಳವಾಗಲಿದೆ.
ಉಪಚುನಾವಣೆ, ಪಂಚಾಯತ್ ಚುನಾವಣೆ ಹಾಗು ಕರೋನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೇಳಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…