ಧಾರವಾಡ: ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೇಳದೇ ಶೇ.90ರಷ್ಟು ಲಾಕ್ಡೌನ್ ಮಾಡಿದ್ದಾರೆ, ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಕ್ರಿಯೆ ಆಗಬೇಕು. ಎರಡನೇ ಅಲೆ ಬರುವುದು ಮೊದಲೇ ಗೊತ್ತಿತ್ತು, ಆದರೂ ಆಸ್ಪತ್ರೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಪೂರ್ವ ಸಿದ್ಧತೆ ಮಾಡಿಲ್ಲ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಪ್ಪು ಎದ್ದು ಕಾಣುತ್ತಿದೆ ಎಂದರು.
ಉಡುಪಿ : ಸ್ವಚ್ಛತಾ ಕಾರ್ಯಕರ್ತನ ಮೇಲೆ ಇಬ್ಬರು ಯುವತಿಯರು ಸೇರಿ ಮೂವರಿಂದ ಹಲ್ಲೆ – Vishwanews24
ಲಾಕ್ಡೌನ್ದಿಂದ ಜನರಿಗೆ ದುಸ್ಥಿತಿ ಬರುತ್ತದೆ, ಒಂದು ಕಡೆ ಚುನಾವಣೆಗಳಲ್ಲಿ ಲಕ್ಷಾಂತರ ಜನ ಸೇರಿಸಿ ರ್ಯಾಲಿ ಮಾಡಿದರು. ಆಗಲೇ ಚುನಾವಣೆಗಳಿಗೆ ತಡೆಯೊಡ್ಡಿ ಕೊರೊನಾ ಕಡೆ ಗಮನ ಕೊಡಬೇಕಿತ್ತು. ಹಾಗೆ ಮಾಡಿದ್ದರೆ ಕೊರೊನಾದಿಂದ ಯಾರೂ ಸಾಯುತ್ತಿರಲಿಲ್ಲ. ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ ಎಂದರು.
ಕೊರೊನಾ ನಿರ್ಲಕ್ಷಿಸಿ, ಚುನಾವಣೆ ಕಡೆ ಗಮನ ಕೊಟ್ಟರು. ಇವರಿಗೆ ಅಧಿಕಾರ ಬೇಕು, ಜನರ ಸಾವು, ನೋವಿನ ವಿಷಯ ಬೇಡವಾಗಿದೆ. ಜನ ಬಹಳ ಬೇಸರ ಮತ್ತು ಆಕ್ರೋಶಿತರಾಗಿದ್ದಾರೆ, ಇನ್ನಾದರೂ ಸಾವು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…