ಕೊರೊನಾ ಹಿನ್ನೆಲೆ : ಉಡುಪಿ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಕೃಷ್ಣಜನ್ಮಾಷ್ಟಮಿ ಆಚರಣೆಯಿಲ್ಲ -Vishwanews24

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ಸೌರಮಾನ ಪಂಚಾಂಗದ ಪ್ರಕಾರ ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡುವುದರಿಂದ ಆಗಸ್ಟ್ 11 ಮತ್ತು 12 ರಂದು ಉಡುಪಿಯಲ್ಲಿ ಅಷ್ಟಮಿಯ ಸಂಭ್ರಮ ಇರುವುದಿಲ್ಲ. ಬದಲಾಗಿ ಸೆಪ್ಟೆಂಬರ್‌ 10ರಂದು ಕೃಷ್ಣಜನ್ಮಾಷ್ಟಮಿ ಹಾಗೂ ಸೆ. 11ರಂದು ಶ್ರೀಕೃಷ್ಣ ಲೀಲೋತ್ಸವ ಆಚರಣೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
ದೇಶದಾದ್ಯಂತ ಆ. 11ರಂದು ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತದೆ. ಆದರೆ ಇದು ಚಾಂದ್ರಮಾನ ಪಂಚಾಂಗದ ಪ್ರಕಾರ ಬರುವ ಕೃಷ್ಣಾಷ್ಟಮಿ ಆಗಿರುವುದರಿಂದ ಕೃಷ್ಣಮಠದಲ್ಲಿ ಇದನ್ನು ಆಚರಣೆ ಮಾಡುವುದಿಲ್ಲ.
ಕೃಷ್ಣಮಠದಲ್ಲಿ ಸೆ. 10ರಂದು ಮಧ್ಯರಾತ್ರಿ 12.15 ಗಂಟೆಗೆ ಚಂದ್ರೋದಯ ಕಾಲದಲ್ಲಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. ಮರುದಿನ ಸೆ. 11 ರಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವದ ಸಂಭ್ರಮ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಾರ್ವಜನಿಕವಾಗಿ ಅಷ್ಟಮಿ ಆಚರಣೆಯಿಲ್ಲ:
ಕೊರೊನಾ ಹಿನ್ನೆಲೆಯಲ್ಲಿ ಇನ್ನೂ ಸಹ ಕೃಷ್ಣಮಠದಲ್ಲಿ ಸಾರ್ವಜನಿಕರು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿಲ್ಲ. ಈ ನಿರ್ಬಂಧ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಅಷ್ಟಮಿ ಆಚರಣೆ ಇರುವುದಿಲ್ಲ. ಸ್ವಾಮೀಜಿಗಳು, ಮಠದ ಆಡಳಿತ ಮಂಡಳಿಯ ಪದಾಧಿಕಾರಿಗಳು ಒಳಗೊಂಡಂತೆ ಸಂಪ್ರದಾಯದಂತೆ ಸಾಂಕೇತಿಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

12 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

12 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago