ಕೊರೊನಾ ಹಿನ್ನೆಲೆ : ಉಡುಪಿ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಕೃಷ್ಣಜನ್ಮಾಷ್ಟಮಿ ಆಚರಣೆಯಿಲ್ಲ -Vishwanews24

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ಸೌರಮಾನ ಪಂಚಾಂಗದ ಪ್ರಕಾರ ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡುವುದರಿಂದ ಆಗಸ್ಟ್ 11 ಮತ್ತು 12 ರಂದು ಉಡುಪಿಯಲ್ಲಿ ಅಷ್ಟಮಿಯ ಸಂಭ್ರಮ ಇರುವುದಿಲ್ಲ. ಬದಲಾಗಿ ಸೆಪ್ಟೆಂಬರ್‌ 10ರಂದು ಕೃಷ್ಣಜನ್ಮಾಷ್ಟಮಿ ಹಾಗೂ ಸೆ. 11ರಂದು ಶ್ರೀಕೃಷ್ಣ ಲೀಲೋತ್ಸವ ಆಚರಣೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
ದೇಶದಾದ್ಯಂತ ಆ. 11ರಂದು ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತದೆ. ಆದರೆ ಇದು ಚಾಂದ್ರಮಾನ ಪಂಚಾಂಗದ ಪ್ರಕಾರ ಬರುವ ಕೃಷ್ಣಾಷ್ಟಮಿ ಆಗಿರುವುದರಿಂದ ಕೃಷ್ಣಮಠದಲ್ಲಿ ಇದನ್ನು ಆಚರಣೆ ಮಾಡುವುದಿಲ್ಲ.
ಕೃಷ್ಣಮಠದಲ್ಲಿ ಸೆ. 10ರಂದು ಮಧ್ಯರಾತ್ರಿ 12.15 ಗಂಟೆಗೆ ಚಂದ್ರೋದಯ ಕಾಲದಲ್ಲಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. ಮರುದಿನ ಸೆ. 11 ರಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವದ ಸಂಭ್ರಮ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಾರ್ವಜನಿಕವಾಗಿ ಅಷ್ಟಮಿ ಆಚರಣೆಯಿಲ್ಲ:
ಕೊರೊನಾ ಹಿನ್ನೆಲೆಯಲ್ಲಿ ಇನ್ನೂ ಸಹ ಕೃಷ್ಣಮಠದಲ್ಲಿ ಸಾರ್ವಜನಿಕರು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿಲ್ಲ. ಈ ನಿರ್ಬಂಧ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಅಷ್ಟಮಿ ಆಚರಣೆ ಇರುವುದಿಲ್ಲ. ಸ್ವಾಮೀಜಿಗಳು, ಮಠದ ಆಡಳಿತ ಮಂಡಳಿಯ ಪದಾಧಿಕಾರಿಗಳು ಒಳಗೊಂಡಂತೆ ಸಂಪ್ರದಾಯದಂತೆ ಸಾಂಕೇತಿಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago