ಕೊರೊನಾ ಹಿನ್ನೆಲೆ : ಉಡುಪಿ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಕೃಷ್ಣಜನ್ಮಾಷ್ಟಮಿ ಆಚರಣೆಯಿಲ್ಲ -Vishwanews24

ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ಸೌರಮಾನ ಪಂಚಾಂಗದ ಪ್ರಕಾರ ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡುವುದರಿಂದ ಆಗಸ್ಟ್ 11 ಮತ್ತು 12 ರಂದು ಉಡುಪಿಯಲ್ಲಿ ಅಷ್ಟಮಿಯ ಸಂಭ್ರಮ ಇರುವುದಿಲ್ಲ. ಬದಲಾಗಿ ಸೆಪ್ಟೆಂಬರ್‌ 10ರಂದು ಕೃಷ್ಣಜನ್ಮಾಷ್ಟಮಿ ಹಾಗೂ ಸೆ. 11ರಂದು ಶ್ರೀಕೃಷ್ಣ ಲೀಲೋತ್ಸವ ಆಚರಣೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.
ದೇಶದಾದ್ಯಂತ ಆ. 11ರಂದು ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತದೆ. ಆದರೆ ಇದು ಚಾಂದ್ರಮಾನ ಪಂಚಾಂಗದ ಪ್ರಕಾರ ಬರುವ ಕೃಷ್ಣಾಷ್ಟಮಿ ಆಗಿರುವುದರಿಂದ ಕೃಷ್ಣಮಠದಲ್ಲಿ ಇದನ್ನು ಆಚರಣೆ ಮಾಡುವುದಿಲ್ಲ.
ಕೃಷ್ಣಮಠದಲ್ಲಿ ಸೆ. 10ರಂದು ಮಧ್ಯರಾತ್ರಿ 12.15 ಗಂಟೆಗೆ ಚಂದ್ರೋದಯ ಕಾಲದಲ್ಲಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. ಮರುದಿನ ಸೆ. 11 ರಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವದ ಸಂಭ್ರಮ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಾರ್ವಜನಿಕವಾಗಿ ಅಷ್ಟಮಿ ಆಚರಣೆಯಿಲ್ಲ:
ಕೊರೊನಾ ಹಿನ್ನೆಲೆಯಲ್ಲಿ ಇನ್ನೂ ಸಹ ಕೃಷ್ಣಮಠದಲ್ಲಿ ಸಾರ್ವಜನಿಕರು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿಲ್ಲ. ಈ ನಿರ್ಬಂಧ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಅಷ್ಟಮಿ ಆಚರಣೆ ಇರುವುದಿಲ್ಲ. ಸ್ವಾಮೀಜಿಗಳು, ಮಠದ ಆಡಳಿತ ಮಂಡಳಿಯ ಪದಾಧಿಕಾರಿಗಳು ಒಳಗೊಂಡಂತೆ ಸಂಪ್ರದಾಯದಂತೆ ಸಾಂಕೇತಿಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago