ಬೆಳಗಾವಿ: ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ₹ 16ಸಾವಿರ ಕೋಟಿ ಖರ್ಚಿನ ಬಗ್ಗೆ ಮಾಹಿತಿ ನೀಡಲಿ. ₹ 20 ಲಕ್ಷ ಕೋಟಿ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ ಎನ್ನುವುದನ್ನು ರಾಜ್ಯ ಸರ್ಕಾರ ತಿಳಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರನ್ನು ಕರೆದು ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಸರ್ವ ಪಕ್ಷ ಸಭೆ ಕರೆಯುವ ಅಗತ್ಯವೇನಿದೆ? ಕೊರೊನಾ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮಾಡಬಾರದ್ದು ಮಾಡಿ ದೇಶಕ್ಕೆ, ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ. ಈಗ ಸಭೆ ಕರೆಯುತ್ತೇವೆ ಎನ್ನುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಸರ್ಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೊರೊನಾ ಕಾಣಿಸಿಕೊಂಡಾಗ ದೀಪ ಬೆಳಗಿ, ಜಾಗಟೆ ಬಾರಿಸಿರಿ ಎಂದರು. ಅವೆಲ್ಲವನ್ನೂ ಜನರು ನಿಷ್ಠೆಯಿಂದ ಮಾಡಿದ್ದಾಯಿತು. ಈಗ 2ನೇ ಅಲೆ ಬಂದಿದೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರಗಳು ವಿಫಲವಾಗಿವೆ. ಈಗ ಕರ್ಫ್ಯೂ ಜಾರಿ ಮಾಡುತ್ತಿದ್ದಾರೆ. ನೈಟ್ ಕರ್ಫ್ಯೂ ಜಾರಿಯಿಂದ ಏನೂ ಪ್ರಯೋಜನ ಆಗುವುದಿಲ್ಲ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಮಾಡುತ್ತಿರುವುದಾದರೂ ಏಕೆ? ಇಷ್ಟ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರು : ರಾಜ್ಯದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…