Featured

ಕೊರೊನಾ : ಹೊಸವರ್ಷಕ್ಕೆ ತಮಿಳುನಾಡಿನ ಬೀಚ್‍ಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ – Vishwanews24

ಕೊರೊನಾ : ಹೊಸವರ್ಷಕ್ಕೆ ತಮಿಳುನಾಡಿನ ಬೀಚ್‍ಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ – Vishwanews24

ಚೆನ್ನೈ: ಕೊರೊನಾ ವೈರಸ್ ತಡೆಗಟ್ಟಲು ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ತಮಿಳುನಾಡು ಸರ್ಕಾರ ಬೀಚ್‍ಗಳಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 31ರಂದು ಮತ್ತು ಜನವರಿ 1ರಂದು ನಿರ್ಬಂಧ ಹೇರಿದೆ.

ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು, ಪ್ರಸ್ತುತ ಪರಿಸ್ಥಿತಿ ಅನುಗುಣವಾಗಿ 6ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲಾಗುತ್ತಿಲ್ಲ. ಆದರೆ ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಮವಾರ ಸಭೆ ನಡೆಸಿದ ಸ್ಟಾಲಿನ್ ಅವರು, ಈ ವೇಳೆ ಡಿಸೆಂಬರ್ 31 ರವರೆಗಿನ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಘೋಷಿಸಿದರು. ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಭೆಗಳಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೂ ಮರೀನಾ ಬೀಚ್ ಸೇರಿದಂತೆ ರಾಜ್ಯದ ಹಲವು ಬೀಚ್‍ಗಳಿಗೆ ಸಾರ್ವನಿಕರ ಪ್ರವೇಶವನ್ನು ನಿರ್ಬಂಧ ಹೇರಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

42 minutes ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

55 minutes ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

2 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

2 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

3 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

3 hours ago