ಮೂಡುಬಿದಿರೆ: ಕೊರೋನಾ ಆತಂಕದ ದಿನಗಳ ತೀವ್ರತೆಯ ಏರಿಳಿತದ ನಡುವೆ ಅನ್ಲಾಕ್ ಆಗುತ್ತಿರುವ ಮೂಡುಬಿದಿರೆ ತಾಲೂಕಿನಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯ ನಂತರದ ಮೊಸರು ಕುಡಿಕೆ ಉತ್ಸವ ಸಂಭ್ರಮ ಸರಳವಾಗಿ ಜರಗಲಿದೆ.
ಯಕ್ಷಗಾನೀಯ ಹಿಮ್ಮೇಳ ಸಹಿತ ವೇಷಧಾರಿ ಶ್ರೀಕೃಷ್ಣನೇ ಬೀದಿಗಳಲ್ಲಿ ಅಡ್ಡಲಾಗಿ ತೂಗು ಹಾಕಿರುವ ಮೊಸರ ಕುಡಿಕೆಗಳನ್ನು ಒಡೆಯುವ ವಿಶಿಷ್ಠ ಉತ್ಸವ ಕೊರೋನಾ ಆತಂಕದ ನಡುವೆಯೂ ಸರಳವಾಗಿ ನಡೆಯಲಿದೆ ಎನ್ನುವುದು ಜನತೆ ಒಂದಿಷ್ಟು ಸಂಭ್ರಮಕ್ಕೆ ತೆರೆದುಕೊಳ್ಳುವಂತಾಗಿದೆ.
ಮೂಡುಬಿದಿರೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳವಾಗಿ ಯಶಸ್ವಿಯಾಗಿ ನಡೆದಿದ್ದು ಆ ಬಳಿಕ ಎರಡನೇ ಸಾರ್ವಜನಿಕ ಉತ್ಸವ ಇದಾಗಿದೆ. ಸಾಮಾಜಿಕ ಅಂತರದ ಕಾಯ್ದುಕೊಳ್ಳುವ ಅನಿವಾರ್ಯತೆಯೂ ಇದೆ. ಈಗಾಗಲೇ ಪೇಟೆಯಲ್ಲಿ ಸದ್ದು ಮಾಡಬೇಕಾಗಿದ್ದ ಹುಲಿಗಳು, ವೇಷಧಾರಿಗಳು, ಅಬ್ಬರ ಎಲ್ಲವೂ ಮಾಯವಾಗಿದ್ದು ಸಾಂಸ್ಕೃತಿಕ ಮೌನದಿಂದ ಹೊರಬರಲು ಮೂಡುಬಿದಿರೆ ಹವಣಿಸುತ್ತಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…