ಕೊರೋನಾ ಕರ್ಫ್ಯೂ : ದಕ, ಉಡುಪಿ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಗಳಿಗೆ ವಿನಾಯತಿ ನೀಡಲು ವಿ ಹಿ ಪ ಮನವಿ -Vishwanews24
ಕೊರೋನಾ ಕರ್ಫ್ಯೂ : ದಕ, ಉಡುಪಿ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಗಳಿಗೆ ವಿನಾಯತಿ ನೀಡಲು ವಿ ಹಿ ಪ ಮನವಿ -Vishwanews24
ಮಂಗಳೂರು: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ
ಈಗಾಗಲೇ ಸರಕಾರ ಏಪ್ರಿಲ್ 10 ರಿಂದ ರಾತ್ರಿ 10 ಗಂಟೆಯಿಂದ ಬೆಳ್ಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಧಾರ್ಮಿಕ ಕಾರ್ಯಕ್ರಮಗಳಾದ ಜಾತ್ರೆ, ನೇಮ ಕೋಲಗಳು, ಬ್ರಹ್ಮಕಲಶ, ಹಾಗು ಯಕ್ಷಗಾನ ಮುಂತಾದ ಕಾರ್ಯಕ್ರಮಗಳು ಈಗಾಗಲೇ ನಿರ್ಧರಿಸಲಾಗಿದ್ದು ಈ ಕರ್ಫ್ಯೂವಿನಿಂದ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯದಂತಾಗುತ್ತವೆ ಆದುದರಿಂದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ರಾಜ್ಯಸರ್ಕಾರಕ್ಕೆ ಈ ಮೂಲಕ ಮನವಿ ಮಾಡುತಿದ್ದೇವೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನಾ ನೈಟ್ ಕರ್ಫ್ಯೂ : ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24
