ಕಲಬುರ್ಗಿ: ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಕೊರೋನಾ ಭ್ರಷ್ಟಾಚಾರ ಬಯಲಿಗೆಳೆದರೆ ನಮಗೆ ನೋಟೀಸ್ ನೀಡುತ್ತಾರೆ. ಇಂತಹ ನೂರು ನೋಟೀಸ್ ಕೊಟ್ಟರೂ ನಾವು ಹೆದರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕೊರೋನಾದಲ್ಲಿ ಅಕ್ರಮ ಆಗಿದೆ ಅಂದ್ರೆ ನಮಗೆ ನೋಟಿಸ್ ಕೊಡ್ತಿರಾ? ಯಾವ ನೋಟಿಸ್ಗೂ ಹೆದರಲ್ಲ. ಇಂತಹ ನೂರು ನೋಟಿಸ್ ಕೊಟ್ಟರೂ ಎದುರಿಸೋ ಶಕ್ತಿ ನಮಗೆ ಜನತೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…