ಕೊರೋನಾ ನೈಟ್ ಕರ್ಫ್ಯೂ  :  ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

Featured, ರಾಜ್ಯ ನ್ಯೂಸ್

ಕೊರೋನಾ  ನೈಟ್ ಕರ್ಫ್ಯೂ  :  ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24

ಬೆಂಗಳೂರು: ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ 8 ನಗರಗಳಾದ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ್, ಬೀದರ್, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ ಏಪ್ರಿಲ್ 10 ರಿಂದ 20 ರ ವರೆಗೆ ಕರೊನ ಕರ್ಪೂ ” ಅನ್ನು ರಾತ್ರಿ 10.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೊಳಿಸಲಾಗಿದ್ದು ಅದರ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಾರ್ಗಸೂಚಿ

ಕರೋನ ಕರ್ಪ್ಯೂ ಸಂದರ್ಭದಲ್ಲಿ ಈ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು, ಉಳಿದಂತೆ ಎಲ್ಲಾ ಸೇವೆಗಳನ್ನು / ಸಂಚಾರಗಳನ್ನು ನಿಷೇಧಿಸಲಾಗಿದೆ.

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ.

ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು / ಕಂಪನಿಗಳು / ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ.

ಆದರೆ, ಸಂಬಂಧಿಸಿದ ಕಾರ್ಮಿಕರು | ನೌಕರರು ಕರೋನ ಕರ್ಪ್ಯೂ ಅವಧಿಗೆ ಮುನ್ನವೆ ಕರ್ತವ್ಯದಲ್ಲಿ ಹಾಜರಿರತಕ್ಕದ್ದು

ಕೊರೊನಾ ವಿರುದ್ಧದ ಲಸಿಕೆ ಕೊರತೆಯು ಒಂದು ಗಂಭೀರ ವಿಚಾರವಾಗಿದ್ದು, ಅದು ಉತ್ಸವ ಅಲ್ಲ : ರಾಹುಲ್ ಗಾಂಧಿ -Vishwanews24

ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.

ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು / ಸರಕು ಸಾಗಾಣಿಕೆ ವಾಹನಗಳು / Home Delivery / E-Commerce ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿಸಿದೆ.

ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಿದೆ. ಪ್ರಯಾಣಿಕರು ಮನೆಯಿಂದ ನಿಲ್ಯಾಣಗಳಿಗೆ ಮತ್ತು ನಿಲ್ಯಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ | ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿಸಿದೆ.

ಈ ಆದೇಶವನ್ನು ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಮೈಸೂರು, ಕಲಬುರಗಿ, ಮಂಗಳೂರು ಮತ್ತು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು. ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತ ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳತಕ್ಕದ್ದು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಉಡುಪಿ : ಫಾಸ್ಟ್ ಫುಡ್ ರೆಸ್ಟೋರೆಂಟ್ ಮಾಲೀಕ ಆತ್ಮಹತ್ಯೆ -Vishwanews24