ಪೂನಾ: ದೇಶದಲ್ಲಿ ಸಾರ್ವತ್ರಿಕ ತುರ್ತು ಬಳಕೆಗೆ ಅನುಮೋದನೆ ಪಡೆದಿರುವ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಹಾಗೂ ಸೀರಮ್ ಇನ್ಸ್ಟಿಟ್ಯೂಟ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯ ವಿತರಣೆ ಪ್ರಕ್ರಿಯೆ ಆರಂಭವಾಗಿದೆ.
ಈಗಾಗಲೇ ಸಂಸ್ಥೆಯ ಕೇಂದ್ರ ಸ್ಥಾನದಿಂದ ದೇಶದ ವಿವಿಧ ಭಾಗಗಳಿಗೆ ಲಸಿಕೆ ಪೂರೈಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಹಲವು ಕಡೆ ಲಸಿಕೆ ಬಂದು ತಲುಪಿದೆ.
ಈ ಕುರಿತು ಮಾತನಾಡಿರುವ ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ, ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ದೇಶದ ಎಲ್ಲ ನಾಗರಿಕರಿಗೂ ಲಸಿಕೆ ಸಿಗಬೇಕು ಎಂಬುದು ಸಂಸ್ಥೆಯ ಅಭಿಲಾಷೆಯಾಗಿದ್ದು, 2021ರಲ್ಲಿ ಈ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲಿದ್ದೇವೆ ಎಂದು ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಮನವಿಯ ಮೇರೆಗೆ ನಾವು ಮೊದಲ 100 ಮಿಲಿಯನ್ ಲಸಿಕೆಗೆ 200 ರೂ. ದರ ನಿಗದಿಪಡಿಸಿದ್ದು, ಬಳಿಕ ಖಾಸಗಿ ಮಾರುಕಟ್ಟೆಯಲ್ಲಿ ಈ ಲಸಿಕೆಗೆ 1,000 ರೂ. ದರ ನಿಗದಿ ಮಾಡಲಾಗುವುದು ಎಂದು ಆದಾರ್ ಪೂನಾವಾಲಾ ಹೇಳಿದ್ದಾರೆ.
ಮೊದಲ 100 ಮಿಲಿಯನ್ ಲಸಿಕೆಯಲ್ಲಿ ಸಂಸ್ಥೆಗೆ ಯಾವುದೇ ಲಾಭ ಇರುವುದಿಲ್ಲ. ದೇಶದ ಒಳಿತಿಗಾಗಿ ನಾವು ಕಿರುಕಾಣಿಕೆಯನ್ನು ನೀಡಿದ್ದು, 100 ಮಿಲಿಯನ್ ಲಸಿಕೆ ಬಳಿಕ ಮಾರಾಟವಾಗುವ ಲಸಿಕೆಯಿಂದ ಮಾತ್ರ ಸಂಸ್ಥೆ ಲಾಭಗಳಿಸಲಿದೆ ಎಂದು ಆದಾರ್ ಪೂನಾವಾಲಾ ನುಡಿದಿದ್ದಾರೆ.
ಕೇವಲ ಭಾರತ ಮಾತ್ರವಲ್ಲದೇ ಆಫ್ರಿಕಾ ಹಾಗೂ ದಕ್ಷಿಣ ಅಮೆರಿಕದ ರಾಷ್ಟ್ರಗಳಿಗೂ ಲಸಿಕೆ ಪೂರೈಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಆದರೆ ಭಾರತದ ಜನರ ಯೋಗಕ್ಷೇಮವೇ ಸಂಸ್ಥೆಯ ಪ್ರಥಮ ಪ್ರಾಶಸ್ತ್ಯವಾಗಿರಲಿದೆ ಎಂದು ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.
ಸದ್ಯ ನಾವು ತಿಂಗಳಿಗೆ 70-80 ಮಿಲಿಯನ್ ಡೋಸ್ಗಳನ್ನು ತಯಾರಿಸುತ್ತಿದ್ದು, ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶನದ ಮೇರೆಗೆ ಇವುಗಳ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ಆದಾರ್ ಪೂನಾವಾಲಾ ಹೇಳಿದ್ದಾರೆ,.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…