Featured

ಕೊರೋನಾ ಲಸಿಕೆ ಪೂರೈಕೆ : ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ : ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ -Vishwanews24

ಕೊರೋನಾ ಲಸಿಕೆ ಪೂರೈಕೆ : ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ : ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ –Vishwanews24

ಪೂನಾ: ದೇಶದಲ್ಲಿ ಸಾರ್ವತ್ರಿಕ ತುರ್ತು ಬಳಕೆಗೆ ಅನುಮೋದನೆ ಪಡೆದಿರುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಸೀರಮ್ ಇನ್ಸ್ಟಿಟ್ಯೂಟ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯ ವಿತರಣೆ ಪ್ರಕ್ರಿಯೆ ಆರಂಭವಾಗಿದೆ.

ಈಗಾಗಲೇ ಸಂಸ್ಥೆಯ ಕೇಂದ್ರ ಸ್ಥಾನದಿಂದ ದೇಶದ ವಿವಿಧ ಭಾಗಗಳಿಗೆ ಲಸಿಕೆ ಪೂರೈಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಹಲವು ಕಡೆ ಲಸಿಕೆ ಬಂದು ತಲುಪಿದೆ.

ಈ ಕುರಿತು ಮಾತನಾಡಿರುವ ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ, ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ದೇಶದ ಎಲ್ಲ ನಾಗರಿಕರಿಗೂ ಲಸಿಕೆ ಸಿಗಬೇಕು ಎಂಬುದು ಸಂಸ್ಥೆಯ ಅಭಿಲಾಷೆಯಾಗಿದ್ದು, 2021ರಲ್ಲಿ ಈ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲಿದ್ದೇವೆ ಎಂದು ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮನವಿಯ ಮೇರೆಗೆ ನಾವು ಮೊದಲ 100 ಮಿಲಿಯನ್ ಲಸಿಕೆಗೆ 200 ರೂ. ದರ ನಿಗದಿಪಡಿಸಿದ್ದು, ಬಳಿಕ ಖಾಸಗಿ ಮಾರುಕಟ್ಟೆಯಲ್ಲಿ ಈ ಲಸಿಕೆಗೆ 1,000 ರೂ. ದರ ನಿಗದಿ ಮಾಡಲಾಗುವುದು ಎಂದು ಆದಾರ್ ಪೂನಾವಾಲಾ ಹೇಳಿದ್ದಾರೆ.

ಮೊದಲ 100 ಮಿಲಿಯನ್ ಲಸಿಕೆಯಲ್ಲಿ ಸಂಸ್ಥೆಗೆ ಯಾವುದೇ ಲಾಭ ಇರುವುದಿಲ್ಲ. ದೇಶದ ಒಳಿತಿಗಾಗಿ ನಾವು ಕಿರುಕಾಣಿಕೆಯನ್ನು ನೀಡಿದ್ದು, 100 ಮಿಲಿಯನ್ ಲಸಿಕೆ ಬಳಿಕ ಮಾರಾಟವಾಗುವ ಲಸಿಕೆಯಿಂದ ಮಾತ್ರ ಸಂಸ್ಥೆ ಲಾಭಗಳಿಸಲಿದೆ ಎಂದು ಆದಾರ್ ಪೂನಾವಾಲಾ ನುಡಿದಿದ್ದಾರೆ.

ಕೇವಲ ಭಾರತ ಮಾತ್ರವಲ್ಲದೇ ಆಫ್ರಿಕಾ ಹಾಗೂ ದಕ್ಷಿಣ ಅಮೆರಿಕದ ರಾಷ್ಟ್ರಗಳಿಗೂ ಲಸಿಕೆ ಪೂರೈಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಆದರೆ ಭಾರತದ ಜನರ ಯೋಗಕ್ಷೇಮವೇ ಸಂಸ್ಥೆಯ ಪ್ರಥಮ ಪ್ರಾಶಸ್ತ್ಯವಾಗಿರಲಿದೆ ಎಂದು ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.

ಸದ್ಯ ನಾವು ತಿಂಗಳಿಗೆ 70-80 ಮಿಲಿಯನ್ ಡೋಸ್‌ಗಳನ್ನು ತಯಾರಿಸುತ್ತಿದ್ದು, ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶನದ ಮೇರೆಗೆ ಇವುಗಳ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ಆದಾರ್ ಪೂನಾವಾಲಾ ಹೇಳಿದ್ದಾರೆ,.

http://ಉಡುಪಿ : ನಮ್ಮ ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದು ಷಡ್ಯಂತ್ರ : ಸಿ.ಟಿ.ರವಿ – Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

4 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

4 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

4 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

5 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

9 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

9 hours ago