ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿಯೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿದ್ದು, ದೇಶದಲ್ಲಿಯೇ ಮುಂಚೂಣಿಯಲ್ಲಿರೊ ನಾಡು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದ್ರಂತೆ, ನಾಲ್ಕೇ ನಾಲ್ಕು ದಿನಗಳಲ್ಲಿ 80,696 ಜನರಿಗೆ ಲಸಿಕೆ ಹಾಕಲಾಗಿದೆ.
ಅಂಕಿ ಅಂಶಗಳ ಪ್ರಕಾರ ನೋಡೋದಾದ್ರೆ, ಮಂಗಳವಾರ ಒಂದೇ ದಿನ 15,223 ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟು 356 ಕೇಂದ್ರಗಳಲ್ಲಿ 32,205 ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 346 ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಯಿತು. ಈವರೆಗೆ ಶೇ.47ರಷ್ಟು ಲಸಿಕೆ ಗುರಿ ಸಾಧಿಸಲಾಗಿದೆ.
ಇನ್ನು ಕರ್ನಾಟಕದ ನಂತರದ 2ನೇ ಸ್ಥಾನ ಆಂಧ್ರಪ್ರದೇಶಕ್ಕೆ ತಕ್ಕಿದ್ದು, ಇಲ್ಲಿ 46,680 ಜನರಿಗೆ ಲಸಿಕೆ ನೀಡಲಾಗಿದೆ. ಅದ್ರಂತೆ, ಒಡಿಶಾ 46,506, ಬಿಹಾರ 33,389, ಪಶ್ಚಿಮ ಬಂಗಾಳ 29,866, ರಾಜಸ್ಥಾನ 23,546, ಉತ್ತರ ಪ್ರದೇಶದಲ್ಲಿ 22,644 ಜನರಿಗೆ ಲಸಿಕೆ ನೀಡಲಾಗಿದೆ.
ಈ ಕುರಿತು ಸ್ವತಃ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದು, ‘ಕೋವಿಡ್ ನಿಯಂತ್ರಣ ಸಂದರ್ಭದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿತ್ತು. ಈಗ ಲಸಿಕೆಯಲ್ಲೂ ನಮ್ಮ ರಾಜ್ಯ ಮುಂದಿದೆ. ಮೊದಲೇ ಯೋಜನೆ ರೂಪಿಸಿ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿರುವುದು, ಎಲ್ಲ ಮೆಡಿಕಲ್ ಕಾಲೇಜುಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿದ್ದರಿಂದ ಲಸಿಕೆ ಹಂಚಿಕೆಯಲ್ಲಿ ಗೊಂದಲವಾಗಿಲ್ಲ. ಡ್ರೈರನ್ ಸಂದರ್ಭದಲ್ಲಿಯೂ ಯಾವುದೇ ಗೊಂದಲ ಆಗಲಿಲ್ಲ’ ಎಂದರು.
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…