ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿಯೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿದ್ದು, ದೇಶದಲ್ಲಿಯೇ ಮುಂಚೂಣಿಯಲ್ಲಿರೊ ನಾಡು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದ್ರಂತೆ, ನಾಲ್ಕೇ ನಾಲ್ಕು ದಿನಗಳಲ್ಲಿ 80,696 ಜನರಿಗೆ ಲಸಿಕೆ ಹಾಕಲಾಗಿದೆ.
ಅಂಕಿ ಅಂಶಗಳ ಪ್ರಕಾರ ನೋಡೋದಾದ್ರೆ, ಮಂಗಳವಾರ ಒಂದೇ ದಿನ 15,223 ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟು 356 ಕೇಂದ್ರಗಳಲ್ಲಿ 32,205 ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 346 ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಯಿತು. ಈವರೆಗೆ ಶೇ.47ರಷ್ಟು ಲಸಿಕೆ ಗುರಿ ಸಾಧಿಸಲಾಗಿದೆ.
ಇನ್ನು ಕರ್ನಾಟಕದ ನಂತರದ 2ನೇ ಸ್ಥಾನ ಆಂಧ್ರಪ್ರದೇಶಕ್ಕೆ ತಕ್ಕಿದ್ದು, ಇಲ್ಲಿ 46,680 ಜನರಿಗೆ ಲಸಿಕೆ ನೀಡಲಾಗಿದೆ. ಅದ್ರಂತೆ, ಒಡಿಶಾ 46,506, ಬಿಹಾರ 33,389, ಪಶ್ಚಿಮ ಬಂಗಾಳ 29,866, ರಾಜಸ್ಥಾನ 23,546, ಉತ್ತರ ಪ್ರದೇಶದಲ್ಲಿ 22,644 ಜನರಿಗೆ ಲಸಿಕೆ ನೀಡಲಾಗಿದೆ.
ಈ ಕುರಿತು ಸ್ವತಃ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದು, ‘ಕೋವಿಡ್ ನಿಯಂತ್ರಣ ಸಂದರ್ಭದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿತ್ತು. ಈಗ ಲಸಿಕೆಯಲ್ಲೂ ನಮ್ಮ ರಾಜ್ಯ ಮುಂದಿದೆ. ಮೊದಲೇ ಯೋಜನೆ ರೂಪಿಸಿ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿರುವುದು, ಎಲ್ಲ ಮೆಡಿಕಲ್ ಕಾಲೇಜುಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿದ್ದರಿಂದ ಲಸಿಕೆ ಹಂಚಿಕೆಯಲ್ಲಿ ಗೊಂದಲವಾಗಿಲ್ಲ. ಡ್ರೈರನ್ ಸಂದರ್ಭದಲ್ಲಿಯೂ ಯಾವುದೇ ಗೊಂದಲ ಆಗಲಿಲ್ಲ’ ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…