ಬೆಂಗಳೂರು: ನಟ ಕಿಚ್ಚ ಸುದೀಪ್ ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. ಇದೀಗ ಮತ್ತೆ ನಾಲ್ಕು ಶಾಲೆಯನ್ನು ಕಿಚ್ಚ ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.
ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ‘ಶಾಲೆಗಾಗಿ ನಾವು-ನೀವು’ ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ.
ನಟ ಸುದೀಪ್ ಅವರ ಕಾರ್ಯಕ್ಕೆ ಸಚಿವ ಡಾ.ಸುಧಾಕರ್ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. “ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.
ಈ ಹಿಂದೆ ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿತ್ತು. ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು, ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…