Featured

ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭ -Vishwanews24

ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭ -Vishwanews24

ಶ್ರೀಮತಿ ಶಿಲ್ಪಾ ಜೋಶಿಯವರ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನ..

ಉಡುಪಿ: ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭವಾಗಿದ್ದು, ಇತ್ತೀಚೆಗೆ ಮಣಿಪಾಲದ ನಿರ್ಮಿತಿ ಕೇಂದ್ರದ ಸುಂದರ ಪರಿಸರದಲ್ಲಿ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ (ರಿ) ಪರ್ಕಳ , ನಿರ್ಮಿತಿ ಕೇಂದ್ರ , ಮಣಿಪಾಲ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಸಹಕಾರ ದೊಂದಿಗೆ ಶ್ರೀಮತಿ ಶಿಲ್ಪಾ ಜೋಶಿಯವರ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಭಾವಗೀತೆಗಳ ಭಾವಸಂಜೆಯಲ್ಲಿ ಉಡುಪಿಯ ಕಲಾವಿದರಾದ ರೇಖ ಸಾಮಗ, ಡಾ.ಪ್ರತಿಮ, ಡಾ.ಪ್ರಜ್ಞಾ ಮಾರ್ಪಳ್ಳಿ ಹಾಗೂ ರಂಜನಿಯವರು ಸುಂದರ ಭಾವಗೀತೆಗಳನ್ನು ಹಾಡಿ ಸಂಜೆಯ ಇಂಪನ್ನು ಹೆಚ್ಚಿಸಿದರು. ನಂತರ ನಡೆದ ಏಕವ್ಯಕ್ತಿ ಪ್ರದರ್ಶನ ನನ್ನೊಳಗಿನ ಅವಳು

ರಚನೆ ಹಾಗೂ ಅಭಿನಯ – ಶಿಲ್ಪಾ ಜೋಶಿ, ಗೀತಂ ಗಿರೀಶ್ ರವರ ಸಂಗೀತ , ಹಾಗೂ ರವಿರಾಜ್ ಹೆಚ್ ಪಿ ಯವರ ಪರಿಕಲ್ಪನೆ ಹಾಗೂ ನಿರ್ದೇಶನದ ರಂಗಪ್ರಯೋಗ ಜನಮನ್ನಣೆಗೆ ಪಾತ್ರವಾಯಿತು.

ಕಾರ್ಯ ಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜೋಶಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಹರೀಶ್ ಜೋಶಿ . ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಪ್ರಭಾ ಶೆಣೈ ಮಾತನಾಡಿದರು. ಜೋಶಿ ಪ್ರತಿಷ್ಠಾನದ ಕಾರ್ಯದರ್ಶಿ ಶಿಲ್ಪಾಜೋಶಿಯವರು ಧನ್ಯವಾದ ಸಮರ್ಪಿಸಿದರು. ರಂಗನಟಿ ಪವಿತ್ರ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಶ್ರೀ ವಿಶ್ವನಾಥಶೆಣೈ, ಹಿರಿಯ ಮುಂಬೈ ಕನ್ನಡ ರಂಗಭೂಮಿಯ ಹೆಸರಾಂತ ನಟ ಮೋಹನ್ ಮಾರ್ನಾಡ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್ ಸಂಧ್ಯಾ ಶೆಣೈ ಸುಗುಣ ಸುವರ್ಣ ಹಾಗೂ ಸಂಘಟಕ ಈಶ್ವರ ಶೆಟ್ಟಿ ಚಿಟ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

26 minutes ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 hour ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 hour ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 hours ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

2 hours ago